ಮಂಡ್ಯ: ಸೋಮವಾರ ರಾತ್ರಿ ಮಂಡ್ಯದಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸೋಮವಾರ ರಾತ್ರಿ ನಗರದ ಆಸ್ಪತ್ರೆ ರಸ್ತೆಯಲ್ಲಿ ನಡೆದ ದುರಂತದಲ್ಲಿ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ರಾಮಯ್ಯನ ಪುತ್ರ ಕಾರ್ತಿಕ್ (28) ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್, ಇವರ ಜೊತೆ ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಕಾರ್ತಿಕ್ ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆಯಲ್ಲಿ ಸ್ನೇಹಿತರಾದ ಸುನೀಲ್ ಮತ್ತು ಚೇರನಹಳ್ಳಿ ಮಂಜು ಅವರೊಂದಿಗೆ ಮಂಡ್ಯ ನಗರಕ್ಕೆ ಓಮ್ನಿ ಕಾರಿನಲ್ಲಿ ಬಟ್ಟೆ ಖರೀದಿಸಲು ಬಂದಿದ್ದರು. ಸೋಮವಾರ ರಾತ್ರಿ 8ರ ಹೊತ್ತಿಗೆ ಗಾಳಿಸಮೇತ ಮಳೆ ಆರಂಭಗೊಂಡಿದ್ದು, ಆಸ್ಪತ್ರೆ ರಸ್ತೆಯ ತಿರುವಿನಲ್ಲಿ ಮರ ಕಾರಿನ ಮೇಲೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ರಕ್ಷಣೆಗೆ ಮುಂದಾಗಿದ್ದರು. ಆದರೆ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಕಾರ್ತಿಕ್ ಸಾವನ್ನಪ್ಪಿದ್ದು, ಇನ್ನಿಬ್ಬರು ಪಾರಾಗಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…