ಮಂಡ್ಯ ಭೀಕರ ಬಸ್ ಅಪಘಾತ : ಸಿಎಂ ಎಚ್‍ಡಿಕೆ ಭೇಟಿ ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

Featured, ಜಿಲ್ಲೆ

ಮಂಡ್ಯ : ಖಾಸಗಿ ಬಸ್​ ನಾಲೆಗೆ​ ಉರುಳಿ 21 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ‌ಕನಗನಮರಡಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. ಈ ನಡುವೆ ರಾಜ್ಯ ಸರಕಾರ ತಲಾ 5 ಲಕ್ಷ ರೂ ಪರಿಹಾರವನ್ನು ಮೃತರ ಕುಟುಂಬಕ್ಕೆ ಘೋಷಣೆ ಮಾಡಿದೆ.

ದುರಂತದ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪೂರ್ವನಿಗದಿತ ಕಾರ್ಯಕ್ರಮಗಳನ್ನೆಲ್ಲ ರದ್ದುಗೊಳಿಸಿದ ಮುಖ್ಯಮಂತ್ರಿ ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳಿದರು. ಸ್ಥಳಕ್ಕೆ ಆಗಮಿಸಿದ ಅವರು ಸಂತ್ರಸ್ತ ಕುಟುಂಬಗಳ ನೋವು ಆಲಿಸಿದರು. ಕುಟುಂಬಗಳ ಆಕ್ರಂದನ, ಹತಾಶೆ ಕಂಡು ಕಣ್ಣೀರು ಸುರಿಸಿದರು.

ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಮಂಡ್ಯ ಉಸ್ತುವಾರಿ ಸಚಿವ ಸಿ ಎಸ್‌ ಪುಟ್ಟರಾಜು ಅವರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿದ್ದಾರೆ.