ಮಂಡ್ಯ: ಲೋಕಸಭಾ ಮಹಾ ಚುನಾವಣೆಗೆ ಮುಹೂರ್ತ ನಿಗದಿಯಾಗಲು ದಿನಗಣನೆ ಪ್ರಾರಂಭವಾಗಿರುವಂತೆಯೇ ರಾಜ್ಯದ ವಿವಿಧ ಹೈವೋಲ್ಟೇಜ್ ಲೋಕಸಭಾ ಕ್ಷೇತ್ರಗಳಲ್ಲಿ ರಂಗಿನ ರಾಜಕೀಯಕ್ಕೆ ಹೆಸರಾಗಿರುವ ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿಯ ಸ್ಪರ್ಧೆ ಕುತೂಹಲದ ತುತ್ತತುದಿಯನ್ನು ತಲುಪಿದಂತಿದೆ.
ಒಂದೆಡೆ ದೋಸ್ತಿಗಳ ಮಾತಿಗೆ ಕಟ್ಟುಬಿದ್ದು ಆಡಳಿತ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ಈ ಕ್ಷೇತ್ರವನ್ನು ಜೆಡಿ(ಎಸ್) ಗೆ ಬಿಟ್ಟುಕೊಟ್ಟಿರುವ ಕಾರಣ ಸ್ವತಃ ಮುಖ್ಯಮಂತ್ರಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ಇಲ್ಲಿ ಯುವ ಅಭ್ಯರ್ಥಿಯಾಗಿ ಮೈತ್ರಿಕೂಟದ ಬೆಂಬಲದೊಂದಿಗೆ ಸ್ಪರ್ಧಿಸುವುದು ಖಚಿತವಾಗಿದೆ. ಇನ್ನೊಂದೆಡೆ ಮಂಡ್ಯದ ಗಂಡು ದಿವಂಗಂತ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ತಮಗೆ ಕಾಂಗ್ರೆಸ್ ಪಕ್ಷ ಮಂಡ್ಯದಲ್ಲಿ ಸ್ಪರ್ಧಿಸಲು ಅವಕಾಶ ನಿರಾಕರಿಸುವ ಮೂಲಕ ತಮ್ಮ ಪತಿ ಮತ್ತು ಅವರ ಬೆಂಬಲಿಗರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿ ಈ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದಂತಿದೆ.
ಇದೆಲ್ಲದರ ನಡುವೆ ಪುಲ್ವಾಮ ಉಗ್ರದಾಳಿಯಲ್ಲಿ ಉಗ್ರರ ಬಾಂಬ್ ದಾಳಿಗೆ ಬಲಿಯಾದ ಸಿ.ಆರ್.ಪಿ.ಎಫ್. ಯೋಧ ಗುರು ಅವರ ಪತ್ನಿ ಕಲಾವತಿ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಯೊಂದು ದಟ್ಟವಾಗಿ ಹರಿದಾಡುತ್ತಿದೆ. ಕಲಾವತಿಯವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ರೆ ಹಿಂದುಳಿದ ಮಡಿವಾಳ ಸಮುದಾಯ ಪ್ರಾಮುಖ್ಯತೆ ನೀಡಿದಂತಾಗುತ್ತದೆ ಹಾಗೂ ಅನುಕಂಪದ ಅಲೆ ಮತಗಳು ದೊರಕಬಹುದು ಎಂಬ ಲೆಕ್ಕಚಾರದೊಂದಿಗೆ ಹಿಂದುಳಿದ ವರ್ಗಗಳ ನಾಯಕ ದ್ವಾರಕಾನಾಥ್, ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದು ಅವರಿಗೆ ಟಿಕೆಟ್ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಎಲ್ಲಾ ರಾಜಕೀಯ ಬೆಳವಣಿಗೆಗಳ ನಡುವೆ ಪ್ರಮುಖ ಪ್ರತಿಪಕ್ಷ ಬಿ.ಜೆ.ಪಿ.ಯ ರಾಜಕೀಯ ನಡೆ ಮಾತ್ರ ಕುತೂಹಲ ಮೂಡಿಸಿದೆ. ಒಟ್ಟಿನಲ್ಲಿ ದೋಸ್ತಿ ಸರಕಾರಕ್ಕೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರವು ಮುಂಬರುವ ದಿನಗಳಲ್ಲಿ ಯಾವೆಲ್ಲಾ ರಾಜಕೀಯ ಬಣ್ಣಗಳನ್ನು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಾಗಿದೆ
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…