Featured

ಮಂಡ್ಯ ಲೋಕಸಭಾ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಕೆ -Vishwanews24

ಮಂಡ್ಯ: ಸುಮಲತಾ ಅಂಬರೀಷ್‌ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಂಡ್ಯ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಸುಮಲತಾ ಅವರು ತಮ್ಮ ಉಮೇದುವಾರಿಕೆಗೆ ಸಂಬಂಧಿಸಿದ ನಾಮಪತ್ರವನ್ನು ಸಲ್ಲಿಸಿದರು. ಸುಮಲತಾ ಅವರು ಮೂರು ಸೆಟ್‌ ಗಳಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಎಲ್ಲಾ ಸಮುದಾಯದ ಮುಖಂಡರನ್ನು ಜೊತೆಯಾಗಿಸಿಕೊಂಡು ಹಾಗೂ ಅಸಂಖ್ಯಾತ ಅಂಬರೀಷ್‌ ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಸುಮಲತಾ ಅವರು ಜಿಲ್ಲಾಧಿಕಾರಿ ಕಛೇರಿಯನ್ನು ತಲುಪಿದರು. ಸುಮಲತಾ ಅವರ ನಮಪತ್ರಕ್ಕೆ ‘ಅಹಿಂದ’ ನಾಯಕರು ಅನುಮೋದನೆ ನೀಡಿದ್ದು ವಿಶೇಷವಾಗಿತ್ತು. ದಲಿತ, ಕುರುಬ, ಗಂಗಾಮತಸ್ಥ ಮತ್ತು ಮುಸ್ಲಿಂ ಸಮುದಾಯದ ಪ್ರತಿನಿಧಿತ್ವದಲ್ಲಿ ‘ಅಹಿಂದ’ ಕಾಂಬಿನೇಷನ್‌ ಗೆ ಮೊರೆ ಹೋಗುವ ಮೂಲಕ ಸುಮಲತಾ ಅವರು ಈ ಮೂಲಕ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸುಮಲತಾ ಅವರು ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಛೇರಿಯಿಂದ ಸಿಲ್ವರ್‌ ಜ್ಯುಬಿಲಿ ಪಾರ್ಕ್‌ ನತ್ತ ಬೃಹತ್‌ ಜಾಥಾ ನಡೆಸಲಿದ್ದಾರೆ. ಜಾಥಾದಲ್ಲಿ ಪುತ್ರ ಅಭಿಷೇಕ್‌ ಅಂಬರೀಷ್‌ ಮತ್ತು ರಾಕಿಂಗ್‌ ಸ್ಟಾರ್‌ ಯಶ್‌ ಅವರು ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಇನ್ನುಳಿದಂತೆ ರಾಕ್‌ ಲೈನ್‌ ವೆಂಕಟೇಶ್‌, ನಟ ದೊಡ್ಡಣ್ಣ ಸೇರಿದಂತೆ ಘಟಾನುಘಟಿಗಳೂ ಸಹ ಈ ಜಾಥಾದಲ್ಲಿ ಭಾಗವಹಿಸುತ್ತಿದ್ದಾರೆ.

ಸುಮಲತಾ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರ ಬೆಂಬಲ
ಮಂಡ್ಯದಲ್ಲಿ ಕೈ-ತೆನೆ ಮೈತ್ರಿ ಅಭ್ಯರ್ಥಿಯಾಗಿ ನಿಖೀಲ್‌ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದರೂ ಮಂಡ್ಯದ ಕೆಲ ಕಾಂಗ್ರೆಸ್‌ ಕಾರ್ಯಕರ್ತರು ಸುಮಲತಾ ಅವರಿಗೆ ಬಹಿರಂಗ ಬೆಂಬಲವನ್ನು ಸೂಚಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ವೇಳೆ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ಸುಮಲತಾ ಅವರಿಗೆ ಬಹಿರಂಗ ಬೆಂಬಲವನ್ನು ಸೂಚಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago