Featured

ಮಂಡ್ಯ ಲೋಕಸಭಾ ಚುನಾವಣೆ : ಸುಮಲತಾ ವಿರುದ್ಧ ಅದೇ ಹೆಸರಿನ ಮೂವರಿಂದ ನಾಮಪತ್ರ ಸಲ್ಲಿಕೆ…Vishwanews24

ಮಂಡ್ಯ :ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಮತದಾರರಲ್ಲಿ ಗೊಂದಲ ಮೂಡಿಸಲು ಸುಮಲತಾ ಹೆಸರಿನ ಮೂವರನ್ನು ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಸುಮಲತಾ ಹೆಸರಿನ ನಾಲ್ವರು ಮಂಡ್ಯ ಲೋಕಸಭಾ ಕಣದಲ್ಲಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ರಂಗನಾಥ ಬಡಾವಣೆಯ ಬಿ ಸುಮಲತಾ,  ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಟಿಎಂ ಹೊಸೂರು ಗ್ರಾಮದ ಸುಮಲತಾ ಹಾಗೂ ಕೆಆರ್ ಪೇಟೆ ತಾಲ್ಲೂಕು ಗೊರವಿ ಗ್ರಾಮದ ಎಂ. ಸುಮಲತಾ ನಾಮಪತ್ರ ಸಲ್ಲಿಸಿದ್ದಾರೆ. ಮಾತ್ರವಲ್ಲ, ಸುಮಲತಾ ಅಂಬರೀಶ್ ಕೇಳಿರುವ ಚಿಹ್ನೆಯನ್ನು ಸುಮಲತಾ ಹೆಸರಿನ ಈ ಮೂವರು ಚುನಾವಣಾ ಆಯೋಗಕ್ಕೆ ಕೇಳಿದ್ದಾರೆ ಎನ್ನಲಾಗಿದೆ.

ಸುಮಲತಾ ಅಂಬರೀಷ್ ಅವರು ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ತೀವ್ರ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಅವರಿಗೆ ಪೈಪೋಟಿ ನೀಡಲು ಹೊಸ ತಂತ್ರ ರೂಪಿಸಲಾಗಿದೆ. ಸುಮಲತಾ ಅವರದೇ ಹೆಸರಿನ ಇನ್ನೂ ಮೂವರು ಮಹಿಳೆಯರು ಮಂಡ್ಯ ಲೋಕಸಭೆಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಹೆಸರಿನ ನಾಲ್ಕು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್, ಸೋಲಿನ ಭಯದಿಂದ ನೇರ ಫೈಟ್ ಮಾಡದೆ ಇಂತಹ ಹಿಂಬಾಗಿಲ ರಾಜಕಾರಣ ಮಾಡಲಾಗುತ್ತಿದೆ. 1 ತಿಂಗಳ ಹಿಂದೆಯೇ ಇದನ್ನು ಕೆಲವರು ನನಗೆ ಹೇಳಿದ್ದರು. ಒಂದೇ ಹೆಸರಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೊಂದಲ ಮೂಡಿಸಲಾಗುತ್ತದೆ ಎಂದು ತಿಳಿಸಿದ್ದರು. ನನಗೆ ಇಂತಹ ರಾಜಕಾರಣ ಬೇಕಿಲ್ಲ. ಅವರೇ ಅವರ ಭಯವನ್ನು ತೋರಿಸಿಕೊಳ್ಳುತ್ತಿದ್ದಾರೆ. ಸುಮಲತಾ ಹೆಸರಿನ ಎಷ್ಟು ಜನರಾದರೂ ನಿಲ್ಲಲಿ. ಅಭ್ಯರ್ಥಿಗಳ ಫೋಟೋ ಇರುತ್ತದೆ. ಜನರಿಗೆ ಅದು ಗೊತ್ತಾಗುತ್ತದೆ. ಇಂತಹ ಕೆಲಸದಿಂದ ಯಾರಿಗೆ ಲಾಭವಾಗುತ್ತದೆ ಎಂಬುದು ಜನರಿಗೆ ತಿಳಿದಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago