ಮಂಡ್ಯ :ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಮತದಾರರಲ್ಲಿ ಗೊಂದಲ ಮೂಡಿಸಲು ಸುಮಲತಾ ಹೆಸರಿನ ಮೂವರನ್ನು ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಸುಮಲತಾ ಹೆಸರಿನ ನಾಲ್ವರು ಮಂಡ್ಯ ಲೋಕಸಭಾ ಕಣದಲ್ಲಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ರಂಗನಾಥ ಬಡಾವಣೆಯ ಬಿ ಸುಮಲತಾ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಟಿಎಂ ಹೊಸೂರು ಗ್ರಾಮದ ಸುಮಲತಾ ಹಾಗೂ ಕೆಆರ್ ಪೇಟೆ ತಾಲ್ಲೂಕು ಗೊರವಿ ಗ್ರಾಮದ ಎಂ. ಸುಮಲತಾ ನಾಮಪತ್ರ ಸಲ್ಲಿಸಿದ್ದಾರೆ. ಮಾತ್ರವಲ್ಲ, ಸುಮಲತಾ ಅಂಬರೀಶ್ ಕೇಳಿರುವ ಚಿಹ್ನೆಯನ್ನು ಸುಮಲತಾ ಹೆಸರಿನ ಈ ಮೂವರು ಚುನಾವಣಾ ಆಯೋಗಕ್ಕೆ ಕೇಳಿದ್ದಾರೆ ಎನ್ನಲಾಗಿದೆ.
ಸುಮಲತಾ ಅಂಬರೀಷ್ ಅವರು ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ತೀವ್ರ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಅವರಿಗೆ ಪೈಪೋಟಿ ನೀಡಲು ಹೊಸ ತಂತ್ರ ರೂಪಿಸಲಾಗಿದೆ. ಸುಮಲತಾ ಅವರದೇ ಹೆಸರಿನ ಇನ್ನೂ ಮೂವರು ಮಹಿಳೆಯರು ಮಂಡ್ಯ ಲೋಕಸಭೆಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಹೆಸರಿನ ನಾಲ್ಕು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್, ಸೋಲಿನ ಭಯದಿಂದ ನೇರ ಫೈಟ್ ಮಾಡದೆ ಇಂತಹ ಹಿಂಬಾಗಿಲ ರಾಜಕಾರಣ ಮಾಡಲಾಗುತ್ತಿದೆ. 1 ತಿಂಗಳ ಹಿಂದೆಯೇ ಇದನ್ನು ಕೆಲವರು ನನಗೆ ಹೇಳಿದ್ದರು. ಒಂದೇ ಹೆಸರಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೊಂದಲ ಮೂಡಿಸಲಾಗುತ್ತದೆ ಎಂದು ತಿಳಿಸಿದ್ದರು. ನನಗೆ ಇಂತಹ ರಾಜಕಾರಣ ಬೇಕಿಲ್ಲ. ಅವರೇ ಅವರ ಭಯವನ್ನು ತೋರಿಸಿಕೊಳ್ಳುತ್ತಿದ್ದಾರೆ. ಸುಮಲತಾ ಹೆಸರಿನ ಎಷ್ಟು ಜನರಾದರೂ ನಿಲ್ಲಲಿ. ಅಭ್ಯರ್ಥಿಗಳ ಫೋಟೋ ಇರುತ್ತದೆ. ಜನರಿಗೆ ಅದು ಗೊತ್ತಾಗುತ್ತದೆ. ಇಂತಹ ಕೆಲಸದಿಂದ ಯಾರಿಗೆ ಲಾಭವಾಗುತ್ತದೆ ಎಂಬುದು ಜನರಿಗೆ ತಿಳಿದಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…