Featured

ಮಂಡ್ಯ ಲೋಕಸಭಾ ಚುನಾವಣೆ : ಸುಮಲತಾ ವಿರುದ್ಧ ಅದೇ ಹೆಸರಿನ ಮೂವರಿಂದ ನಾಮಪತ್ರ ಸಲ್ಲಿಕೆ…Vishwanews24

ಮಂಡ್ಯ :ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಮತದಾರರಲ್ಲಿ ಗೊಂದಲ ಮೂಡಿಸಲು ಸುಮಲತಾ ಹೆಸರಿನ ಮೂವರನ್ನು ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಸುಮಲತಾ ಹೆಸರಿನ ನಾಲ್ವರು ಮಂಡ್ಯ ಲೋಕಸಭಾ ಕಣದಲ್ಲಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ರಂಗನಾಥ ಬಡಾವಣೆಯ ಬಿ ಸುಮಲತಾ,  ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಟಿಎಂ ಹೊಸೂರು ಗ್ರಾಮದ ಸುಮಲತಾ ಹಾಗೂ ಕೆಆರ್ ಪೇಟೆ ತಾಲ್ಲೂಕು ಗೊರವಿ ಗ್ರಾಮದ ಎಂ. ಸುಮಲತಾ ನಾಮಪತ್ರ ಸಲ್ಲಿಸಿದ್ದಾರೆ. ಮಾತ್ರವಲ್ಲ, ಸುಮಲತಾ ಅಂಬರೀಶ್ ಕೇಳಿರುವ ಚಿಹ್ನೆಯನ್ನು ಸುಮಲತಾ ಹೆಸರಿನ ಈ ಮೂವರು ಚುನಾವಣಾ ಆಯೋಗಕ್ಕೆ ಕೇಳಿದ್ದಾರೆ ಎನ್ನಲಾಗಿದೆ.

ಸುಮಲತಾ ಅಂಬರೀಷ್ ಅವರು ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ತೀವ್ರ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಅವರಿಗೆ ಪೈಪೋಟಿ ನೀಡಲು ಹೊಸ ತಂತ್ರ ರೂಪಿಸಲಾಗಿದೆ. ಸುಮಲತಾ ಅವರದೇ ಹೆಸರಿನ ಇನ್ನೂ ಮೂವರು ಮಹಿಳೆಯರು ಮಂಡ್ಯ ಲೋಕಸಭೆಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಹೆಸರಿನ ನಾಲ್ಕು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್, ಸೋಲಿನ ಭಯದಿಂದ ನೇರ ಫೈಟ್ ಮಾಡದೆ ಇಂತಹ ಹಿಂಬಾಗಿಲ ರಾಜಕಾರಣ ಮಾಡಲಾಗುತ್ತಿದೆ. 1 ತಿಂಗಳ ಹಿಂದೆಯೇ ಇದನ್ನು ಕೆಲವರು ನನಗೆ ಹೇಳಿದ್ದರು. ಒಂದೇ ಹೆಸರಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೊಂದಲ ಮೂಡಿಸಲಾಗುತ್ತದೆ ಎಂದು ತಿಳಿಸಿದ್ದರು. ನನಗೆ ಇಂತಹ ರಾಜಕಾರಣ ಬೇಕಿಲ್ಲ. ಅವರೇ ಅವರ ಭಯವನ್ನು ತೋರಿಸಿಕೊಳ್ಳುತ್ತಿದ್ದಾರೆ. ಸುಮಲತಾ ಹೆಸರಿನ ಎಷ್ಟು ಜನರಾದರೂ ನಿಲ್ಲಲಿ. ಅಭ್ಯರ್ಥಿಗಳ ಫೋಟೋ ಇರುತ್ತದೆ. ಜನರಿಗೆ ಅದು ಗೊತ್ತಾಗುತ್ತದೆ. ಇಂತಹ ಕೆಲಸದಿಂದ ಯಾರಿಗೆ ಲಾಭವಾಗುತ್ತದೆ ಎಂಬುದು ಜನರಿಗೆ ತಿಳಿದಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 hour ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

3 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago