Featured

ಮಂಡ್ಯ ಹನಿಟ್ರ್ಯಾಪ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್  ; ಜಗನ್ನಾಥ್ ಶೆಟ್ಟಿ ಕೊಟ್ಟ ದೂರು ಸುಳ್ಳು, ವೀಡಿಯೋದಲ್ಲಿರುವುದು ಸುಳ್ಳು – Vishwanews24

ಜಗನ್ನಾಥ್ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣಕ್ಕೆ ಟ್ವಿಸ್ಟ್  ; ಜಗನ್ನಾಥ್ ಶೆಟ್ಟಿ ಕೊಟ್ಟ ದೂರು ಸುಳ್ಳು, ವೀಡಿಯೋದಲ್ಲಿರುವುದು ಸುಳ್ಳು ; ರೂಮಿನಲ್ಲಿದ್ದ ಯುವತಿಯಿಂದಲೇ ಜಗನ್ನಾಥ ಶೆಟ್ಟಿಗೆ ಖೆಡ್ಡಾ

ಮಂಡ್ಯ: ಜಿಲ್ಲೆಯಲ್ಲಿ ಚಿನ್ನದಂಗಡಿ ಮಾಲೀಕನ ಹನಿಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಜಗನ್ನಾಥ್ ಶೆಟ್ಟಿ ಕೊಟ್ಟ ದೂರು ಸುಳ್ಳು, ವೀಡಿಯೋದಲ್ಲಿರುವುದು ಸುಳ್ಳು ಎಂದು ಪೊಲೀಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ.

ಜಗನ್ನಾಥ್ ಶೆಟ್ಟಿಯನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಹಲವು ದಿನಗಳಿಂದ ಪ್ಲಾನ್ ನಡೆದಿತ್ತು. ಜಗನ್ನಾಥ್ ಶೆಟ್ಟಿ ಜೊತೆಗೆ ಲಾಡ್ಜ್‌ನಲ್ಲಿ ಸಿಕ್ಕಿಕೊಂಡಿದ್ದ ಯುವತಿ ಕೂಡ ಸಲ್ಮಾ ಭಾನು ಆಂಡ್ ಟೀಂನ ಸದಸ್ಯೆಯಾಗಿದ್ದಾಳೆ. ಆ ಯವತಿ ಮೂಲಕವೇ ಜಗನ್ನಾಥ್ ಶೆಟ್ಟಿಗೆ ಖೆಡ್ಡಾ ತೋಡಿದ್ದಾರೆ.

ಇನ್ನು ಮೈಸೂರಿನ ದರ್ಶನ್ ಲಾಡ್ಜ್ ನಲ್ಲಿ ರೂಂ ಪಡೆದು, ಯುವತಿಯೊಂದಿಗೆ ಜಗನ್ನಾಥ ಶೆಟ್ಟಿ ಇರೋ ಮಾಹಿತಿ ತಿಳಿದಂತ ಸಲ್ಮಾ ಗ್ಯಾಂಗ್, ದಿಢೀರ್ ಅವರ ರೂಂ ಗೆ ದಾಳಿ ನಡೆಸಿತ್ತು. ದಾಳಿಯ ವೇಳೆಯಲ್ಲಿ ವೀಡಿಯೋ ಕೂಡ ಚಿತ್ರೀಕರಣ ಮಾಡಿಕೊಂಡಿತ್ತು. ಜೊತೆಗೆ ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿಯವರನ್ನು ಮನಬಂಧಂತೆ ಥಳಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿತ್ತು.

ಯುವತಿ ಚಿಕ್ಕಪ್ಪ ಎಂದು ನಟಿಸಿ ಜಗನ್ನಾಥ ಶೆಟ್ಟಿಯನ್ನು ಗ್ಯಾಂಗ್ ಲಾಕ್ ಮಾಡಿದ್ದಲ್ಲದೇ ಈ ವೀಡಿಯೋವನ್ನು ರೆಕಾರ್ಡ್ ಮಾಡಿ ಹಣಕ್ಕಾಗಿ ಜಗನ್ನಾಥ್ ಶೆಟ್ಟಿ ಬಳಿ ಬೇಡಿಕೆ ಇಟ್ಟಿದೆ. ಇದರಿಂದ ಭಯಭೀತನಾಗಿ ನಿಜಕ್ಕೂ ಯುವತಿಯ ಚಿಕ್ಕಪ್ಪನೇ ಬಂದಿದ್ದಾನೆಂದು ನಂಬಿ ಲಕ್ಷ, ಲಕ್ಷ ಹಣಕೊಟ್ಟವನ್ನು ಗ್ಯಾಂಗ್‍ಗೆ ಜಗನ್ನಾಥ್ ಶೆಟ್ಟಿ ನೀಡಿದ್ದಾನೆ. ಆದರೆ ಎಷ್ಟೇ ಹಣ ಕೊಟ್ಟರೂ ಇವರ ಹಾವಳಿ ನಿಲ್ಲದೇ ಇದ್ದಾಗ ಜಗನ್ನಾಥ್ ಶೆಟ್ಟಿ ಪೊಲೀಸರ ಮೊರೆ ಹೋಗಿದ್ದಾನೆ. ಫೆಬ್ರುವರಿ 26ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಆಗಸ್ಟ್ 19 ರಂದು ಮರ್ಯಾದೆಗೆ ಅಂಜಿ ಅಪಹರಣ ಮತ್ತು ಬ್ಲಾಕ್ ಮೇಲ್ ದೂರನ್ನು ಜಗನ್ನಾಥ್ ಶೆಟ್ಟಿ ನೀಡಿದ್ದಾನೆ.

ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆಸೀಸ್ ನಾಯಕ ಆಯರೋನ್ ಫಿಂಚ್ – Vishwanews24

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

13 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

13 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

17 hours ago