ಮಂಡ್ಯ: ಇಲ್ಲಿನ ಕೆರಗೋಡು ಹನುಮಧ್ವಜ ತೆರವು ಪ್ರಕರಣ ಅಯೋಧ್ಯೆಯ ಅಂಗಳದಲ್ಲಿ ಸದ್ದು ಮಾಡಿದೆ. ಹಿಂದೂ ಕಾರ್ಯಕರ್ತರು ಅಯೋಧ್ಯೆಯ ಬಾಲರಾಮನ ದರ್ಶನ ಪಡೆದು, ಮತ್ತೆ ಹನುಮಧ್ವಜ ಹಾರಿಸುತ್ತೇವೆ ಎಂದು ದೇವಾಲಯದ ಆವರಣದಲ್ಲಿ ಘೋಷಣೆ ಕೂಗಿದ್ದಾರೆ.
ಹನುಮಧ್ವಜ ವಿವಾದದ ಬಳಿಕ ಕೆರಗೋಡು ಗ್ರಾಮಸ್ಥರು ಹಾಗೂ ಹಿಂದೂ ಕಾರ್ಯಕರ್ತರು ಅಯೋಧ್ಯೆ ಪ್ರವಾಸಕ್ಕೆ ತೆರಳಿದ್ದಾರೆ. ಈ ವೇಳೆ ಶ್ರೀರಾಮನ ದರ್ಶನ ಪಡೆದ ಗ್ರಾಮಸ್ಥರು ಶ್ರೀರಾಮನ ಸನ್ನಿಧಿಯಲ್ಲಿ ನಿಂತು ಹನುಮಧ್ವಜ ಹಾರಿಸುವ ಘೋಷಣೆ ಕೂಗಿದ್ದಾರೆ. ಈ ಮೂಲಕ ಕೆರಗೋಡಿನಲ್ಲಿ ಮತ್ತೆ ಹನುಮಧ್ವಜ ಹಾರಿಸಲು ಗ್ರಾಮಸ್ಥರು ಪಣ ತೊಟ್ಟಿದ್ದಾರೆ.
ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು 108 ಅಡಿ ಎತ್ತರದಲ್ಲಿ ಹನುಮಧ್ವಜ ಹಾರಿಸಿದ್ದಕ್ಕೆ ಆ ಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದರು. ಹನುಮಧ್ವಜ ಇಳಿಸಿದ್ದಕ್ಕೆ ಗ್ರಾಮದಲ್ಲಿ ಪ್ರತಿಭಟನೆ ಸಹ ನಡೆದಿತ್ತು. ಹನುಮಧ್ವಜ ಹಾರಿಸಲು ಅವಕಾಶ ನೀಡಬೇಕು ಎಂದು ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಇದೇ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಹಿಂದೂ ಸಂಘಟನೆಗಳು ಮಂಡ್ಯ ಬಂದ್ ಸಹ ಮಾಡಿ ಜಿಲ್ಲಾಡಳಿತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಇದೀಗ ಮತ್ತೆ ಕೆರಗೋಡು ಗ್ರಾಮಸ್ಥರು ರಾಮನ ಸನ್ನಿಧಿಯಲ್ಲಿ ನಿಂತು ಕೆರಗೋಡಲ್ಲಿ ಹನುಮ ಧ್ವಜ ಹಾರಿಸುವ ಪಣ ತೊಟ್ಟಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…