ಮಂಡ್ಯ: ಇಲ್ಲಿನ ಕೆರಗೋಡು ಹನುಮಧ್ವಜ ತೆರವು ಪ್ರಕರಣ ಅಯೋಧ್ಯೆಯ ಅಂಗಳದಲ್ಲಿ ಸದ್ದು ಮಾಡಿದೆ. ಹಿಂದೂ ಕಾರ್ಯಕರ್ತರು ಅಯೋಧ್ಯೆಯ ಬಾಲರಾಮನ ದರ್ಶನ ಪಡೆದು, ಮತ್ತೆ ಹನುಮಧ್ವಜ ಹಾರಿಸುತ್ತೇವೆ ಎಂದು ದೇವಾಲಯದ ಆವರಣದಲ್ಲಿ ಘೋಷಣೆ ಕೂಗಿದ್ದಾರೆ.
ಹನುಮಧ್ವಜ ವಿವಾದದ ಬಳಿಕ ಕೆರಗೋಡು ಗ್ರಾಮಸ್ಥರು ಹಾಗೂ ಹಿಂದೂ ಕಾರ್ಯಕರ್ತರು ಅಯೋಧ್ಯೆ ಪ್ರವಾಸಕ್ಕೆ ತೆರಳಿದ್ದಾರೆ. ಈ ವೇಳೆ ಶ್ರೀರಾಮನ ದರ್ಶನ ಪಡೆದ ಗ್ರಾಮಸ್ಥರು ಶ್ರೀರಾಮನ ಸನ್ನಿಧಿಯಲ್ಲಿ ನಿಂತು ಹನುಮಧ್ವಜ ಹಾರಿಸುವ ಘೋಷಣೆ ಕೂಗಿದ್ದಾರೆ. ಈ ಮೂಲಕ ಕೆರಗೋಡಿನಲ್ಲಿ ಮತ್ತೆ ಹನುಮಧ್ವಜ ಹಾರಿಸಲು ಗ್ರಾಮಸ್ಥರು ಪಣ ತೊಟ್ಟಿದ್ದಾರೆ.
ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು 108 ಅಡಿ ಎತ್ತರದಲ್ಲಿ ಹನುಮಧ್ವಜ ಹಾರಿಸಿದ್ದಕ್ಕೆ ಆ ಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದರು. ಹನುಮಧ್ವಜ ಇಳಿಸಿದ್ದಕ್ಕೆ ಗ್ರಾಮದಲ್ಲಿ ಪ್ರತಿಭಟನೆ ಸಹ ನಡೆದಿತ್ತು. ಹನುಮಧ್ವಜ ಹಾರಿಸಲು ಅವಕಾಶ ನೀಡಬೇಕು ಎಂದು ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಇದೇ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಹಿಂದೂ ಸಂಘಟನೆಗಳು ಮಂಡ್ಯ ಬಂದ್ ಸಹ ಮಾಡಿ ಜಿಲ್ಲಾಡಳಿತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಇದೀಗ ಮತ್ತೆ ಕೆರಗೋಡು ಗ್ರಾಮಸ್ಥರು ರಾಮನ ಸನ್ನಿಧಿಯಲ್ಲಿ ನಿಂತು ಕೆರಗೋಡಲ್ಲಿ ಹನುಮ ಧ್ವಜ ಹಾರಿಸುವ ಪಣ ತೊಟ್ಟಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…