Featured

ಮಂಡ್ಯ :  22 ಅಕ್ರಮ ಕಲ್ಲು ಗಣಿಗಾರಿಕೆಗಳ ಪರವಾನಗಿ ರದ್ದು -Vishwanews24

ಮಂಡ್ಯ :  22 ಅಕ್ರಮ ಕಲ್ಲು ಗಣಿಗಾರಿಕೆಗಳ ಪರವಾನಗಿ ರದ್ದು -Vishwanews24

ಮಂಡ್ಯ : ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಮಂಡ್ಯ ಇವರ ಅಧ್ಯಕ್ಷತೆಯಲ್ಲಿ ಜುಲೈ 28 ರಂದು ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ(ಗಣಿ) ಸಭೆಯಲ್ಲಿ ಅವಧಿ ವಿಸ್ತರಿಸಿ ನೀಡಿದ ಕಲ್ಲು ಗಣಿಗುತ್ತಿಗೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಪ್ರಾಧಿಕಾರದಿಂದ ಇದುವರೆಗೂ ಪರಿಸರ ವಿಮೋಚನಾ ಪತ್ರವನ್ನು ಪಡೆದು ಕಛೇರಿಗೆ ಹಾಜರುಪಡಿಸದೆ ಇರುವ 11 ಕಲ್ಲುಗಣಿಗುತ್ತಿಗೆಗಳನ್ನು ರದ್ದುಪಡಿಸಲು ನಿರ್ಣಯಿಸಲಾಗಿರುತ್ತದೆ. ಅದರಂತೆ ಮಂಡ್ಯ ಜಿಲ್ಲೆಯಾದ್ಯಂತ ಪರಿಸರ ವಿಮೋಚನಾ ಪತ್ರ ಪಡೆಯದೆ ಇದ್ದ 11 ಕಲ್ಲು ಗಣಿ ಗುತ್ತಿಗೆಗಳನ್ನು ಜುಲೈ 31 ರಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿರುತ್ತದೆ.

ಪಾಂಡವಪುರ ತಾಲ್ಲೂಕು ಬೇಬಿಬೆಟ್ಟದಕಾವಲು ಗ್ರಾಮದ ವ್ಯಾಪ್ತಿಯಲ್ಲಿನ 07 ಕ್ರಷರ್ ಘಟಕಗಳನ್ನು Karnataka Regulation of Stone Crusher Act 2011 ರ ಕಲಂ 6(1)(b) ರಂತೆ ಕ್ರಷರ್‌ ಸುರಕ್ಷತಾ ವಲಯವು ಜಿಲ್ಲಾ ಮುಖ್ಯ ರಸ್ತೆಯ 100 ಮೀಟರ್ ವ್ಯಾಪ್ತಿಯೊಳಗೆ ಇರತಕ್ಕದ್ದಲ್ಲ. ಪರವಾನಿಗೆದಾರರಿಗೆ ಕ್ರಷರ್ ಪರವಾನಿಗೆ ನೀಡಲಾಗಿರುವ ಪ್ರದೇಶವು ಲೋಕೋಪಯೋಗಿ ಇಲಾಖೆ ಹಾಗೂ ತಾಂತ್ರಿಕ ಅಧಿಕಾರಿಗಳ ವರದಿಯಂತೆ ಜಿಲ್ಲಾ ಮುಖ್ಯ ರಸ್ತೆಯ 100 ಮೀಟರ್ ಅಂತರದೊಳಗೆ ಬರುತ್ತಿರುವುದರಿಂದ ಕ್ರಷರ್ ಘಟಕಗಳಿಗೆ ನೀಡಲಾಗಿರುವ ಕ್ರಷರ್ ಲೈಸೆನ್ಸ್ (ಫಾರಂ-ಸಿ)ಯನ್ನು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲುಪುಡಿ ಮಾಡುವ ರದ್ದುಪಡಿಸಿರುತ್ತಾರೆ. ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯ ತೀರ್ಮಾನಂತೆ ಹಿರಿಯ ಭೂವಿಜ್ಞಾನಿ ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ಇವರು ಕ್ರಷರ್ ಪರವಾನಿಗೆಗೆ ಸಹಿ ಮಾಡಿ ವಿತರಿಸಿರುವ ಕ್ರಷರ್ ಪರವಾನಿಗೆಗಳನ್ನು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯಲ್ಲಿ ರದ್ದುಪಡಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು 22 ಕ್ರಷರ್‌ಗಳ ಕ್ರಷರ್ ಪರವಾನಿಗೆ(ಫಾರಂ-ಸಿ)ಯನ್ನು ರದ್ದುಪಡಿಸಿರುತ್ತಾರೆ.

ಮುಂದುವರೆದು ಪಾಂಡವಪುರ ತಾಲ್ಲೂಕು ಬೇಬಿಬೆಟ್ಟದಕಾವಲು ಗ್ರಾಮದ ವ್ಯಾಪ್ತಿಯಲ್ಲಿನ 04 ಕ್ರಷರ್ ಘಟಕಗಳನ್ನು Karnataka Regulation of Stone Crusher Act 2011 ರ ಕಲಂ 6(1)(b) ರಂತೆ ಕ್ರಷರ್ ಸುರಕ್ಷತಾ ವಲಯವು ಜಿಲ್ಲಾ ಮುಖ್ಯ ರಸ್ತೆಯ 100 ಮೀಟರ್ ವ್ಯಾಪ್ತಿಯೊಳಗೆ ಇರತಕ್ಕದ್ದಲ್ಲ. ಪರವಾನಿಗೆದಾರರಿಗೆ ಕ್ರಷರ್‌ ಪರವಾನಿಗೆ ನೀಡಲಾಗಿರುವ ಪ್ರದೇಶವು ಲೋಕೋಪಯೋಗಿ ಇಲಾಖೆ ಹಾಗೂ ತಾಂತ್ರಿಕ ಅಧಿಕಾರಿಗಳ ವರದಿಯಂತೆ ಜಿಲ್ಲಾ ಮುಖ್ಯ ರಸ್ತೆಯ 100 ಮೀಟರ್ ಅಂತರದೊಳಗೆ ಬರುತ್ತಿರುವುದರಿಂದ ಹಾಗೂ ಹಿರಿಯ ಭೂವಿಜ್ಞಾನಿ ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ಇವರು ಕ್ರಷರ್ ಪರವಾನಿಗೆಗೆ ಸಹಿ ಮಾಡಿ ವಿತರಿಸಿರುವುದರಿಂದ ಜುಲೈ 28 ರಂದು ನಡೆದ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯಲ್ಲಿ ರದ್ದುಪಡಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು 04 ಕ್ರಷರ್‌ಗಳ ಕ್ರಷರ್ ಪರವಾನಿಗೆ(ಫಾರಂ-ಸಿ)ಯನ್ನು ರದ್ದುಪಡಿಸಿರುತ್ತಾರೆ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

41 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

48 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

52 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

59 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago