Featured

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ : ಒಬ್ಬನ ಬಂಧನ , ಮತ್ತೊಬ್ಬ ನಾಪತ್ತೆ – vishwanews24 https://wp.me/p9KQap-oUM

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ , ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ

ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ ನಡೆದಿದೆ.

ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44), ಸಾಯಿ ಬಾಬಾ (24) ಮತಾಂತರಕ್ಕೆ ಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದರು. ಈ ವೇಳೆ ಮುಸ್ಲಿಂ ಧರ್ಮವನ್ನು ಬೋಧನೆ ಮಾಡಲಾಗಿದೆ ಎಂದು ಗಾದಿಲಿಂಗಪ್ಪ ಎನ್ನುವವರು ದೂರು ನೀಡಿದ್ದಾರೆ.
ಅನ್ಯ ಧರ್ಮದವರು ತಮ್ಮ ಗುರುಗಳ ಬಗ್ಗೆ ಬೋಧನೆ ಮಾಡುತ್ತಿರುವ ದೃಶ್ಯವನ್ನು ಗಾದಿಲಿಂಗಪ್ಪ ಸೆರೆಹಿಡಿದಿದ್ದಾರೆ.

ಅನ್ಯ ಧರ್ಮದವರು ಮಾತನಾಡಿದ ಬಳಿಕ ಯಾತ್ರಾತ್ರಿಗಳಿಗೆ ಅವರ ಮಾತು ನಂಬಬೇಡಿ ಅವರೆಲ್ಲ ಮತಾಂತರ ಮಾಡುತ್ತಾರೆ ಎಂದು ಗಾದಿಲಿಂಗಪ್ಪ ಬುದ್ಧಿ‌ಹೇಳಿದರು.

ಮತಾಂತರ ಮಾಡಲು ಪ್ರಯತ್ನ ಮಾಡಿದ ಹಿನ್ನೆಲೆಯಲ್ಲಿ ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಮತ್ತೋರ್ವ ಆರೋಪಿ ಸಾಯಿಬಾಬಾ ಎಂಬಾತ ನಾಪತ್ತೆಯಾಗಿದ್ದಾರೆ.

Vishwa News 24

Recent Posts

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

17 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

22 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

29 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

35 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago