ಕಳೆದ ವಾರವಷ್ಟೇ ಮೇಲುಕೋಟೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟಿ ರಚಿತಾ ರಾಮ್ ಇಂದು ಮುಂಜಾನೆ ಮಂತ್ರಾಲಯಕ್ಕೂಭೇಟಿ ನೀಡಿ ಗುರುರಾಯರ ದರ್ಶನ ಪಡೆದಿದ್ದಾರೆ. ರಾಯರ ಗುರುವೈಭವೋತ್ಸವ ಹಿನ್ನೆಲೆಯಲ್ಲಿ ಅವರು ಮಂತ್ರಾಲಯಕ್ಕೆ ಬಂದಿದ್ದು, ರಾಯರ ಮೂಲವೃಂದಾವನ ದರ್ಶನ ಪಡೆದರು. ನಂತರ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಳಿಗ್ಗೆ 5 ಗಂಟೆಗೆ ರಚಿತಾ ರಾಮ್ ಹೆಜ್ಜೆ ನಮಸ್ಕಾರ ಹಾಕಿದ್ದಾರೆ. ಸಾಮಾನ್ಯವಾಗಿ ಹರಕೆ ಹೊತ್ತವರು ಮಠದ ಪ್ರಾಂಗಣದಲ್ಲಿ ಹೆಜ್ಜೆ ನಮಸ್ಕಾರ ಹಾಕುವುದು ವಾಡಿಕೆ. ಹಾಗಾಗಿ ರಚಿತಾ ಕೂಡ ಹರಕೆ ಹೊತ್ತಿದ್ದರು ಎಂದು ಹೇಳಲಾಗುತ್ತಿದೆ. ನಟಿ ಚೂಡಿದಾರ್ ನಲ್ಲಿ ಬಂದ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ದರ್ಶನಕ್ಕೆ ಅವಕಾಶ ನೀಡಿದೆ ಮಠದ ಸಿಬ್ಬಂದಿ.
ಗುರುವೈಭವೋತ್ಸವ ಹಿನ್ನೆಲೆ ಸಂಜೆ ರಚಿತಾ ರಾಮ್ ಗೆ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸನ್ಮಾನ ಕಾರ್ಯಕ್ರಮವಿದೆ. ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ರಚಿತಾ ರಾಮ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳಿಂದ ಸಂಜೆ ನಡೆಯು ಕಾರ್ಯಕ್ರಮದಲ್ಲಿ ಗುರುವೈಭವೋತ್ಸವ ಪ್ರಶಸ್ತಿ ಪಡೆಯಲಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…