ಕಳೆದ ವಾರವಷ್ಟೇ ಮೇಲುಕೋಟೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟಿ ರಚಿತಾ ರಾಮ್ ಇಂದು ಮುಂಜಾನೆ ಮಂತ್ರಾಲಯಕ್ಕೂಭೇಟಿ ನೀಡಿ ಗುರುರಾಯರ ದರ್ಶನ ಪಡೆದಿದ್ದಾರೆ. ರಾಯರ ಗುರುವೈಭವೋತ್ಸವ ಹಿನ್ನೆಲೆಯಲ್ಲಿ ಅವರು ಮಂತ್ರಾಲಯಕ್ಕೆ ಬಂದಿದ್ದು, ರಾಯರ ಮೂಲವೃಂದಾವನ ದರ್ಶನ ಪಡೆದರು. ನಂತರ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಳಿಗ್ಗೆ 5 ಗಂಟೆಗೆ ರಚಿತಾ ರಾಮ್ ಹೆಜ್ಜೆ ನಮಸ್ಕಾರ ಹಾಕಿದ್ದಾರೆ. ಸಾಮಾನ್ಯವಾಗಿ ಹರಕೆ ಹೊತ್ತವರು ಮಠದ ಪ್ರಾಂಗಣದಲ್ಲಿ ಹೆಜ್ಜೆ ನಮಸ್ಕಾರ ಹಾಕುವುದು ವಾಡಿಕೆ. ಹಾಗಾಗಿ ರಚಿತಾ ಕೂಡ ಹರಕೆ ಹೊತ್ತಿದ್ದರು ಎಂದು ಹೇಳಲಾಗುತ್ತಿದೆ. ನಟಿ ಚೂಡಿದಾರ್ ನಲ್ಲಿ ಬಂದ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ದರ್ಶನಕ್ಕೆ ಅವಕಾಶ ನೀಡಿದೆ ಮಠದ ಸಿಬ್ಬಂದಿ.
ಗುರುವೈಭವೋತ್ಸವ ಹಿನ್ನೆಲೆ ಸಂಜೆ ರಚಿತಾ ರಾಮ್ ಗೆ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸನ್ಮಾನ ಕಾರ್ಯಕ್ರಮವಿದೆ. ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ರಚಿತಾ ರಾಮ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳಿಂದ ಸಂಜೆ ನಡೆಯು ಕಾರ್ಯಕ್ರಮದಲ್ಲಿ ಗುರುವೈಭವೋತ್ಸವ ಪ್ರಶಸ್ತಿ ಪಡೆಯಲಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…