ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

Featured, ರಾಜ್ಯ ನ್ಯೂಸ್

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ

ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ ಚಾಲನೆ 

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಆ.27ರಿಂದ ಸೆ.2ರವರೆಗೆ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.

ಆ.29ರಂದು ಪೂರ್ವಾರಾಧನೆ, 30ರಂದು ಮಧ್ಯಾರಾಧನೆ ಹಾಗೂ 31ರಂದು ಉತ್ತಾರಾಧನೆ ಜರುಗಲಿದೆ. ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ ಚಾಲನೆ ನೀಡಲಾಗುವುದು.

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಆ.29ರಂದು ಉತ್ತಾರಾಧನೆ ನಡೆಯಲಿದ್ದು, ಅಂದು ಸಂಜೆ ಅನುಗ್ರಹ ಪ್ರಶಸ್ತಿ ಪ್ರದಾನ ಜರುಗಲಿದೆ. ಶ್ರೀಮಠದ ಸಂಸ್ಕೃತ ಪಾಠಶಾಲೆಯ ಪ್ರಾಚಾರ್ಯರಾದ ನಾಗರ ಹಳ್ಳಿ ವಾದಿರಾಜಾಚಾರ್ಯ ಹಾಗೂ ತಾಂಜಾ ವೂರಿನ ಶಾಸ್ತ್ರ ವಿಶ್ವವಿದ್ಯಾಲಯದ ಉಪ ಕುಲಪತಿ ವೈದ್ಯನಾಥನ್ ಸುಬ್ರಮಣಿಯನ್ ಅವರಿಗೆ ಈ ಬಾರಿ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆ.30ರಂದು ಮಧ್ಯಾರಾಧನೆ ಜರುಗಲಿದ್ದು, ವಿಶೇಷ ಪಂಚಾಮೃತ ಅಭಿಷೇಕ ಜರುಗಲಿದೆ. ಮಠದ ಪ್ರಾಂಗಣದಲ್ಲಿ ಪ್ರಹ್ಲಾದರಾಜರ ಚಿನ್ನದ ರಥೋತ್ಸವ ಜರುಗಲಿದೆ. ಆ.31ರಂದು ಉತ್ತಾರಾಧನೆ ಜರುಗಲಿದ್ದು, ವಸಂತೋತ್ಸವ ಹಾಗೂ ಮಠದ ರಥಬೀದಿಯಲ್ಲಿ ರಾಯರ ರಥೋತ್ಸವ ಜರುಗಲಿದೆ.
ಸೆ.1ರಂದು ಶ್ರೀಮಠದ ಪೂರ್ವ ಪೀಠಾಧಿಪತಿಗಳಾದ ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನಾ ಮಹೋತ್ಸವ ಜರುಗಲಿದೆ. ಸೆ.2ರಂದು ಸರ್ವ ಸಮರ್ಪಣ ಮಹೋತ್ಸವದೊಂದಿಗೆ ಆರಾಧನಾ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ ಎಂದರು.

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

Leave a Reply