ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ ಆತ್ಮಹತ್ಯೆಗೆ ಶರಣು -Vishwanews24

ಮಂಗಳೂರು: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ(43) ಮಂಗಳವಾರ ನಗರದ ಕುಲಶೇಖರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕುಲಶೇಖರದಲ್ಲಿರುವ ಯಕ್ಷಗಾನ ಕಲಾವಿದ ಸಂತೋಷ್ ಎಂಬುವರ ಮನೆ ಆವರಣದಲ್ಲಿ ಸುಬ್ರಹ್ಮಣ್ಯ ಆಚಾರ್ಯ ಮಂಗಳವಾರ ಬೆಳಗ್ಗೆ 11.30ರ ಸುಮಾರಿಗೆ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ 2.30ಕ್ಕೆ ಮೃತಪಟ್ಟಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ನಿವಾಸಿ ಸುಬ್ರಹ್ಮಣ್ಯ ಆಚಾರ್ಯ, ಹಲವು ವರ್ಷಗಳಿಂದ ಮಂದಾರ್ತಿ ಒಂದನೇ ಮೇಳದ ಭಾಗವತರಾಗಿ ಬಡಗು ಶೈಲಿಯಲ್ಲಿ ವಿಶೇಷ ಛಾಪು ಮೂಡಿಸಿದ್ದರು. ಉಡುಪಿ ಸಮೀಪದ ಸಂತೆಕಟ್ಟೆಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಸ್ತ್ರೀ ವೇಷಧಾರಿ ಸಂತೋಷ್ ಕುಲಶೇಖರ ಕೂಡ ಹಿಂದೆ ಮಂದಾರ್ತಿ ಮೇಳದಲ್ಲಿ ಕಲಾವಿದರಾಗಿದ್ದರು. ಆಗಿನಿಂದಲೂ ಇಬ್ಬರೂ ಸ್ನೇಹಿತರಾಗಿದ್ದರು. ಬಳಿಕ ಅವರು ಮಂದಾರ್ತಿ ಮೇಳ ತೊರೆದು ಸಸಿಹಿತ್ಲು ಯಕ್ಷಗಾನ ಮೇಳ ಸೇರಿದ್ದರು. ಆ ಬಳಿಕವೂ ಇಬ್ಬರೂ ಒಟ್ಟಾಗಿ ನಡುಮನೆ ಎಂಬ ಯಕ್ಷಗಾನ ಕಾರ್ಯಕ್ರಮವನ್ನು ಅಲ್ಲಲ್ಲಿ ಆಯೋಜಿಸುತ್ತಿದ್ದರು.

ಮಾರಣಕಟ್ಟೆ ಸಮೀಪದ ಮೇಲ್ ಹೊಸೂರಿನಲ್ಲಿ ಸೋಮವಾರ ರಾತ್ರಿ ನಡೆದ ಮಂದಾರ್ತಿ ಮತ್ತು ಮಾರಣಕಟ್ಟೆ ಮೇಳಗಳ ಕೂಡಾಟದಲ್ಲಿ ಸುಬ್ರಹ್ಮಣ್ಯ ಆಚಾರ್ಯ ಭಾಗವತಿಕೆ ನಡೆಸಿದ್ದರು. ಮಂಗಳವಾರ ಬೆಳಗ್ಗೆ ಮಂಗಳೂರಿಗೆ ಬಂದು ಸಂತೋಷ್ ಮನೆಯ ಬಳಿ ಹೋಗಿದ್ದರು. ಅಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
‘ಪತಿ ಅತಿಯಾಗಿ ಮದ್ಯ ಸೇವಿಸುತ್ತಿದ್ದರು ಮತ್ತು ಹೆಚ್ಚು ಸಾಲ ಮಾಡಿಕೊಂಡಿದ್ದರು. ಸಾಲಗಾರರು ಹಣ ಕೇಳಿದಾಗ ಒತ್ತಡಕ್ಕೊಳಗಾಗುತ್ತಿದ್ದರು’ ಎಂದು ಮೃತರ ಪತ್ನಿ ಕದ್ರಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

2 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

4 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

7 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

7 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

8 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

8 hours ago