ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ ಆತ್ಮಹತ್ಯೆಗೆ ಶರಣು -Vishwanews24

ಮಂಗಳೂರು: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ(43) ಮಂಗಳವಾರ ನಗರದ ಕುಲಶೇಖರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕುಲಶೇಖರದಲ್ಲಿರುವ ಯಕ್ಷಗಾನ ಕಲಾವಿದ ಸಂತೋಷ್ ಎಂಬುವರ ಮನೆ ಆವರಣದಲ್ಲಿ ಸುಬ್ರಹ್ಮಣ್ಯ ಆಚಾರ್ಯ ಮಂಗಳವಾರ ಬೆಳಗ್ಗೆ 11.30ರ ಸುಮಾರಿಗೆ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ 2.30ಕ್ಕೆ ಮೃತಪಟ್ಟಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ನಿವಾಸಿ ಸುಬ್ರಹ್ಮಣ್ಯ ಆಚಾರ್ಯ, ಹಲವು ವರ್ಷಗಳಿಂದ ಮಂದಾರ್ತಿ ಒಂದನೇ ಮೇಳದ ಭಾಗವತರಾಗಿ ಬಡಗು ಶೈಲಿಯಲ್ಲಿ ವಿಶೇಷ ಛಾಪು ಮೂಡಿಸಿದ್ದರು. ಉಡುಪಿ ಸಮೀಪದ ಸಂತೆಕಟ್ಟೆಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಸ್ತ್ರೀ ವೇಷಧಾರಿ ಸಂತೋಷ್ ಕುಲಶೇಖರ ಕೂಡ ಹಿಂದೆ ಮಂದಾರ್ತಿ ಮೇಳದಲ್ಲಿ ಕಲಾವಿದರಾಗಿದ್ದರು. ಆಗಿನಿಂದಲೂ ಇಬ್ಬರೂ ಸ್ನೇಹಿತರಾಗಿದ್ದರು. ಬಳಿಕ ಅವರು ಮಂದಾರ್ತಿ ಮೇಳ ತೊರೆದು ಸಸಿಹಿತ್ಲು ಯಕ್ಷಗಾನ ಮೇಳ ಸೇರಿದ್ದರು. ಆ ಬಳಿಕವೂ ಇಬ್ಬರೂ ಒಟ್ಟಾಗಿ ನಡುಮನೆ ಎಂಬ ಯಕ್ಷಗಾನ ಕಾರ್ಯಕ್ರಮವನ್ನು ಅಲ್ಲಲ್ಲಿ ಆಯೋಜಿಸುತ್ತಿದ್ದರು.

ಮಾರಣಕಟ್ಟೆ ಸಮೀಪದ ಮೇಲ್ ಹೊಸೂರಿನಲ್ಲಿ ಸೋಮವಾರ ರಾತ್ರಿ ನಡೆದ ಮಂದಾರ್ತಿ ಮತ್ತು ಮಾರಣಕಟ್ಟೆ ಮೇಳಗಳ ಕೂಡಾಟದಲ್ಲಿ ಸುಬ್ರಹ್ಮಣ್ಯ ಆಚಾರ್ಯ ಭಾಗವತಿಕೆ ನಡೆಸಿದ್ದರು. ಮಂಗಳವಾರ ಬೆಳಗ್ಗೆ ಮಂಗಳೂರಿಗೆ ಬಂದು ಸಂತೋಷ್ ಮನೆಯ ಬಳಿ ಹೋಗಿದ್ದರು. ಅಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
‘ಪತಿ ಅತಿಯಾಗಿ ಮದ್ಯ ಸೇವಿಸುತ್ತಿದ್ದರು ಮತ್ತು ಹೆಚ್ಚು ಸಾಲ ಮಾಡಿಕೊಂಡಿದ್ದರು. ಸಾಲಗಾರರು ಹಣ ಕೇಳಿದಾಗ ಒತ್ತಡಕ್ಕೊಳಗಾಗುತ್ತಿದ್ದರು’ ಎಂದು ಮೃತರ ಪತ್ನಿ ಕದ್ರಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

6 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

7 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

7 hours ago