ಮಂಗಳೂರು: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ(43) ಮಂಗಳವಾರ ನಗರದ ಕುಲಶೇಖರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕುಲಶೇಖರದಲ್ಲಿರುವ ಯಕ್ಷಗಾನ ಕಲಾವಿದ ಸಂತೋಷ್ ಎಂಬುವರ ಮನೆ ಆವರಣದಲ್ಲಿ ಸುಬ್ರಹ್ಮಣ್ಯ ಆಚಾರ್ಯ ಮಂಗಳವಾರ ಬೆಳಗ್ಗೆ 11.30ರ ಸುಮಾರಿಗೆ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ 2.30ಕ್ಕೆ ಮೃತಪಟ್ಟಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ನಿವಾಸಿ ಸುಬ್ರಹ್ಮಣ್ಯ ಆಚಾರ್ಯ, ಹಲವು ವರ್ಷಗಳಿಂದ ಮಂದಾರ್ತಿ ಒಂದನೇ ಮೇಳದ ಭಾಗವತರಾಗಿ ಬಡಗು ಶೈಲಿಯಲ್ಲಿ ವಿಶೇಷ ಛಾಪು ಮೂಡಿಸಿದ್ದರು. ಉಡುಪಿ ಸಮೀಪದ ಸಂತೆಕಟ್ಟೆಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.
ಸ್ತ್ರೀ ವೇಷಧಾರಿ ಸಂತೋಷ್ ಕುಲಶೇಖರ ಕೂಡ ಹಿಂದೆ ಮಂದಾರ್ತಿ ಮೇಳದಲ್ಲಿ ಕಲಾವಿದರಾಗಿದ್ದರು. ಆಗಿನಿಂದಲೂ ಇಬ್ಬರೂ ಸ್ನೇಹಿತರಾಗಿದ್ದರು. ಬಳಿಕ ಅವರು ಮಂದಾರ್ತಿ ಮೇಳ ತೊರೆದು ಸಸಿಹಿತ್ಲು ಯಕ್ಷಗಾನ ಮೇಳ ಸೇರಿದ್ದರು. ಆ ಬಳಿಕವೂ ಇಬ್ಬರೂ ಒಟ್ಟಾಗಿ ನಡುಮನೆ ಎಂಬ ಯಕ್ಷಗಾನ ಕಾರ್ಯಕ್ರಮವನ್ನು ಅಲ್ಲಲ್ಲಿ ಆಯೋಜಿಸುತ್ತಿದ್ದರು.
ಮಾರಣಕಟ್ಟೆ ಸಮೀಪದ ಮೇಲ್ ಹೊಸೂರಿನಲ್ಲಿ ಸೋಮವಾರ ರಾತ್ರಿ ನಡೆದ ಮಂದಾರ್ತಿ ಮತ್ತು ಮಾರಣಕಟ್ಟೆ ಮೇಳಗಳ ಕೂಡಾಟದಲ್ಲಿ ಸುಬ್ರಹ್ಮಣ್ಯ ಆಚಾರ್ಯ ಭಾಗವತಿಕೆ ನಡೆಸಿದ್ದರು. ಮಂಗಳವಾರ ಬೆಳಗ್ಗೆ ಮಂಗಳೂರಿಗೆ ಬಂದು ಸಂತೋಷ್ ಮನೆಯ ಬಳಿ ಹೋಗಿದ್ದರು. ಅಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
‘ಪತಿ ಅತಿಯಾಗಿ ಮದ್ಯ ಸೇವಿಸುತ್ತಿದ್ದರು ಮತ್ತು ಹೆಚ್ಚು ಸಾಲ ಮಾಡಿಕೊಂಡಿದ್ದರು. ಸಾಲಗಾರರು ಹಣ ಕೇಳಿದಾಗ ಒತ್ತಡಕ್ಕೊಳಗಾಗುತ್ತಿದ್ದರು’ ಎಂದು ಮೃತರ ಪತ್ನಿ ಕದ್ರಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…