ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಬುಧವಾರದಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಸಜ್ಜಾಗಿದೆ.
ಮಕರ ಜ್ಯೋತಿ ಉತ್ಸವದ ಅಂಗವಾಗಿ ಅಯ್ಯಪ್ಪ ಸ್ವಾಮಿ ವಿಗ್ರಹಕ್ಕೆ ತೊಡಿಸುವ ಪವಿತ್ರ ಆಭರಣಗಳ ಶೋಭಾಯಾತ್ರೆ ಗುರುವಾರ ಪಂದಳ ಅರಮನೆಯಿಂದ ಆರಂಭವಾಗಿದೆ.
ಮಕರ ಜ್ಯೋತಿ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಮಾಲಾಧಾರಿಗಳು ಶಬರಿಮಲೆಗೆ ಆಗಮಿಸಿದ್ದಾರೆ. ಜತೆಗೆ ಭಕ್ತರು ಕೂಡ ಭಾರಿ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.
ಶಬರಿಮಲೆ ದೇವಸ್ಥಾನದಲ್ಲಿ ಆಚರಿಸಲಾಗುವ ಮಕರ ಜ್ಯೋತಿ ಕೇರಳದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ. “ದೇವರ ಸ್ವಂತ ನಾಡು” ಎಂದು ಕರೆಯಲ್ಪಡುವ ಕೇರಳದ ಜನರು ಸಂಪೂರ್ಣವಾಗಿ ಶ್ರದ್ಧೆ ಹೊಂದಿದ್ದಾರೆ ಮತ್ತು ಧಾರ್ಮಿಕ ಆಧಾರದ ಮೇಲೆ ಈ ಪವಿತ್ರ ಮೆರವಣಿಗೆಗಳು ಮತ್ತು ಆಚರಣೆಗಳನ್ನು ಆಯೋಜಿಸುತ್ತಾರೆ.
ಕೇರಳದ ಶಬರಿಮಲೆ ಎಂಬ ಬೆಟ್ಟದ ಪುಣ್ಯಕ್ಷೇತ್ರವು ಈ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತದೆ. ಉತ್ಸವಗಳಲ್ಲಿ ಪಾಲ್ಗೊಳ್ಳಲು ಮತ್ತು ಈ ಮಂಗಳಕರ ದಿನದಂದು ಸಾಧುಗಳ ವಿಧಿವಿಧಾನಗಳನ್ನು ವೀಕ್ಷಿಸಲು ಸಾವಿರಾರು ಭಕ್ತರು ಅಲ್ಲಿಗೆ ಪ್ರಯಾಣಿಸುತ್ತಾರೆ. ಪ್ರತೀ ವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿಯನ್ನು 2023 ರ ಜನವರಿ 14 ರಂದು ಆಚರಿಸಲಾಗುತ್ತದೆ.
ಮಕರ ಜ್ಯೋತಿ 2023 ರ ದಿನಾಂಕ ಮತ್ತು ಸಮಯ:
ಶಬರಿಮಲೆಯಿಂದ 4 ಕಿಲೋಮೀಟರ್ ದೂರದಲ್ಲಿರುವ ಪೊನ್ನಂಬಲಮೇಡುವಿನಲ್ಲಿ 2023 ರ ಜನವರಿ 14 ರಂದು ಶನಿವಾರ ಸಂಜೆ 6:00 ರಿಂದ 8:00 ಗಂಟೆಯ ನಡುವೆ ಮಕರ ಜ್ಯೋತಿ ಗೋಚರಿಸಲಿದೆ.
ಮಕರ ಜ್ಯೋತಿ ಎಂದರೇನು..?
ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವ ಆ ವಿಶೇಷ ಶುಭ ಮುಹೂರ್ತದಲ್ಲಿ ಆಕಾಶದಲ್ಲಿ ಬೆಳಗುವ ನಕ್ಷತ್ರವೇ ಮಕರ ಜ್ಯೋತಿ. ಅಂದರೆ ಮಕರ ಜ್ಯೋತಿಯನ್ನು ಆಕಾಶದಲ್ಲಿ ಕಾಣಿಸಿಕೊಳ್ಳುವ ನಕ್ಷತ್ರ ಎಂದು ಹೇಳಲಾಗುತ್ತದೆ. ಅದು, ಮಕರ ಮಾಸದ ಮೊದಲ ದಿನದಂದು ಉದಯಿಸುವ ನಕ್ಷತ್ರವನ್ನು ಮಕರಜ್ಯೋತಿ ಎಂದು ಕರೆಯಲಾಗುತ್ತದೆ. ಈ ನಕ್ಷತ್ರವು ಸೂರ್ಯಾಸ್ತದ ನಂತರ ಹೆಚ್ಚು ಗೋಚರಿಸುತ್ತದೆ ಮತ್ತು ಸ್ವಲ್ಪ ಸಮಯದೊಳಗೆ ಕಣ್ಮರೆಯಾಗುತ್ತದೆ. ಪಂದಳಂನಿಂದ ಶಬರಿಮಲೆಗೆ ಅಯ್ಯಪ್ಪನ ತಿರುವಾಭರಣವನ್ನು ತರುವ ದಿನದಂದು ಈ ನಕ್ಷತ್ರವು ಆಕಾಶದಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತದೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…