Featured

ಮಕರ ಸಂಕ್ರಾಂತಿ : ಉಡುಪಿಯಲ್ಲಿ ಸಂಭ್ರಮದ ಮೂರು ತೇರು ಉತ್ಸವ -Vishwanews24

ಮಕರ ಸಂಕ್ರಾoತಿಯ ಅಂಗವಾಗಿ ಉಡುಪಿಯಲ್ಲಿ ಸಂಭ್ರಮದ ಮೂರು ತೇರು ಉತ್ಸವ -Vishwanews24

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದಿರುವ ಸಪ್ತೋತ್ಸವದ ಆರನೇ ದಿನವಾದ ಶುಕ್ರವಾರ ರಾತ್ರಿ ಮಕರ ಸಂಕ್ರಾತಿಯ ಅಂಗವಾಗಿ ಪರ್ಯಾಯ ಅದಮಾರು ಮಠಾಧೀಶರ ನೇತೃತ್ವದಲ್ಲಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು

ಸಂಜೆ ಶ್ರೀ ಕೃಷ್ಣ ಮುಖ್ಯಪ್ರಾಣರ ಮೂರ್ತಿಗಳನ್ನು ಸುವರ್ಣ ಪಲ್ಲಕ್ಕಿಯಲ್ಲಿ ಗರ್ಭಗುಡಿಯಿಂದ ಹೊರತಂದು ರಂಗುರಂಗಿನ ವಿದ್ಯುದ್ಧೀಪಗಳಿಂದ ಅಲಂಕೃತ ಮಧ್ವ ಸರೋವರದಲ್ಲಿ ತೆಪ್ಪೋತ್ಸವ ನಡೆಸಲಾಯಿತು. ಬಳಿಕ ಬ್ರಹ್ಮರಥದಲ್ಲಿ ಶ್ರೀಕೃಷ್ಣನ ಉತ್ಸವ ಮೂರ್ತಿಯನ್ನು ಗರುಡ ರಥದಲ್ಲಿ ಮುಖ್ಯಪ್ರಾಣನನ್ನು ಹಾಗೂ ಮಹಾಪೂಜಾ ರಥದಲ್ಲಿ ಶ್ರೀ ಅನಂತೇಶ್ವರ ಹಾಗೂ ಚಂದ್ರಮೌಳ್ವೀಶ್ವರ ಮೂರ್ತಿಯನ್ನಿರಿಸಿ ರಥಬೀದಿಗೆ ಒಂದು ಸುತ್ತು ಬರಲಾಯಿತು.

ಭಕ್ತರಿಂದ ಎಳೆಯಲ್ಪಟ್ಟ ಮೂರು ರಥಗಳು ರಥಬೀದಿಯ ದಕ್ಷಿಣ ಭಾಗದಲ್ಲಿ ಒಂದೇ ರೇಖೆಯಲ್ಲಿ ನಿಂತಾಗ ಹಲವಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಜಯಘೋಷ ಮಾಡಿದರು, ರಥಗಳ ಮುಂದೆ ವರ್ಣವೈವಿಧ್ಯ ಅತ್ಯಾಕರ್ಷಕ ಸುಡುಮದ್ದುಗಳನ್ನು ಸಿಡಿಸಿ ಆಕಾಶದಲ್ಲಿ ಬಣ್ಣಗಳ ಚಿತ್ತಾರವನ್ನು ಮೂಡಿಸಲಾಯಿತು.

ಆಚಾರ್ಯ ಮಧ್ವರು 13 ನೇ ಶತಮಾನದಲ್ಲಿ ಮಕರ ಸಂಕ್ರಾಂತಿಯಿಂದ ಕೃಷ್ಣ ವಿಗ್ರಹವನ್ನು ಪ್ರತಿಷ್ಠಾಪಿಸಿದ ನೆನಪಿಗಾಗಿ ವಾರ್ಷಿಕ ಜಾತ್ರೆಯನ್ನು ಆಚರಿಸಲಾಗುತ್ತದೆ. ಶನಿವಾರ ಬೆಳಿಗ್ಗೆ ಹಗಲು ರಥೋತ್ಸವ, ಚೂರ್ಣೋತ್ಸವದೊಂದಿಗೆ ಒಂದು ವಾರದ ಸಪ್ತೋತ್ಸವ ಮುಕ್ತಾಯಗೊಳ್ಳಲಿದೆ.

ಸರಕಾರದ ಕೋವಿಡ್‌ ನಿಯಮಾವಳಿಗಳಿದ್ದರೂ ಕೂಡ ಮೂರು ತೇರು ಉತ್ಸವಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

18 minutes ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

9 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

9 hours ago