Featured

ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಿ : ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ -Vishwanews24

ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಿ : ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ -Vishwanews24

ಉಡುಪಿ : ಜ್ಞಾನವೆಂಬುದು ಹರಿಯುವ ನೀರಾಗಿದ್ದು, ಶಿಕ್ಷಕರು ಓದುವ ಹವ್ಯಾಸ ಬೆಳೆಸಿಕೊಳ್ಳುವುದರೊಂದಿಗೆ ಹೆಚ್ಚು ಜ್ಞಾನ ಹೊಂದಿ ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಇಂದು ನಗರದ ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸರ‍್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಆಯೋಜಿಸಿದ ಪ್ರೇರಣಾ ಕರ‍್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದು ಪ್ರಪಂಚ ಹತ್ತು ರ‍್ಷಕ್ಕೊಮ್ಮೆ ಬದಲಾಗುತ್ತಿದೆ. ವಾತಾವರಣ , ಹವಾಮಾನ, ಜೀವನಶೈಲಿಯಲ್ಲಿ ಇದನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರು ವಿದ್ಯರ‍್ಥಿಗಳಿಗೆ ಮುಂದಿನ ಇಪ್ಪತ್ತು ರ‍್ಷದ ಜ್ಞಾನಾಧಾರಿತ ಶಿಕ್ಷಣವನ್ನು ನೀಡಬೇಕು. ಆಗ ಮಾತ್ರ ಶಿಕ್ಷಣದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದರು.
ಸಂವಿಧಾನ ನಮಗೆ ಮೂಲಭೂತ ರ‍್ತವ್ಯಗಳನ್ನು ಕೊಟ್ಟಿದೆ. ಆ ರ‍್ತವ್ಯದಲ್ಲಿ ಶ್ರೇಷ್ಠತೆ ಇದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಶಿಸ್ತುಬದ್ಧ ಶಿಕ್ಷಣದ ಜೊತೆಗೆ ಶಾಲೆಯ ಪರಿಸರವು ಕೂಡ ಅಷ್ಟೇ ಸ್ವಚ್ಛಂಧವಾಗಿರಬೇಕು. ಈ ತರಹದ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಯಾವುದೇ ಕೊರತೆ ಇಲ್ಲ. ಸಿ.ಎಸ್.ಆರ್ ಫಂಡ್ ನೀಡಲು ಜಿಲ್ಲೆಯಲ್ಲಿ ಸುಮಾರು ಕರ‍್ಪೋರೇಟ್ ಸಂಸ್ಥೆಗಳಿವೆ. ಅವುಗಳ ನೆರವು ಪಡೆಯಬಹುದು ಎಂದರು, ಶಾಲೆಗಳಲ್ಲಿ ಅಶಿಸ್ತಿನ ವಾತಾವರಣ ಕಂಡುಬಂದಲ್ಲಿ ಅಂತಹ ಶಾಲಾ ಮುಖ್ಯಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಒಟ್ಟು ೨೬೧ ಪ್ರೌಢಶಾಲೆಗಳಿದ್ದು, ಅದರಲ್ಲಿ ೧೦೬ ಸರಕಾರಿ ಪ್ರೌಢಶಾಲೆಗಳು, ೭೦ ಅನುದಾನಿತ ಹಾಗೂ ೮೫ ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಒಟ್ಟು ೧೩,೫೫೮ ಎಸ್.ಎಸ್.ಎಲ್.ಸಿ ವಿದ್ಯರ‍್ಥಿಗಳು ಪ್ರಸಕ್ತ ಸಾಲಿನಲ್ಲಿ ಓದುತ್ತಿದ್ದು, ವಿದ್ಯಾಭ್ಯಾಸಕ್ಕೆ ಯಾವುದೇ ಅಡೆ-ತಡೆಯಾಗದಂತೆ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರೊಂದಿಗೆ ಉತ್ತಮ ಜ್ಞಾನಾಧರಿತ ಶಿಕ್ಷಣ ನೀಡುವುದರೊಂದಿಗೆ ಜಿಲ್ಲೆಗೆ ಹೆಸರು ತರುವಂತಾಗಬೇಕು ಎಂದರು.
ಜಿಲ್ಲಾ ಪಂಚಾಯತ್‌ನ ಮುಖ್ಯಕರ‍್ಯನರ‍್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಭವಿಷ್ಯ ಶಿಕ್ಷಕರ ಮೇಲಿರುತ್ತದೆ. ಮಕ್ಕಳ ಶಿಕ್ಷಣದ ಕೊರತೆ ಹಾಗೂ ಮನಸ್ಥಿತಿ ಅರಿತು ಬೋಧನೆ ಮಾಡಬೇಕು. ವಿದ್ಯರ‍್ಥಿಗಳ ವಿದ್ಯಾಭ್ಯಾಸಕ್ಕೆ ಶಾಲಾ ಶಿಕ್ಷಕರು ಪೂರಕ ವಾತಾವರಣವನ್ನು ಕಲ್ಪಿಸುವುದರೊಂದಿಗೆ ಉತ್ತಮ ಶಿಕ್ಷಣವನ್ನು ನೀಡಬೇಕೆಂದು ಹೇಳಿದರು.

ಹಿರಿಯ ಉಪನ್ಯಾಸಕ ಹರಿಪ್ರಸಾದ್ ಮಾತನಾಡಿ, ಮಕ್ಕಳಿಗೆ ಪಾಠ ಮಾಡುವ ಮೊದಲು ಅವರ ಮನಸ್ಸನ್ನು ಏಕಾಗ್ರತೆಗೆ ಒಳಪಡಿಸಬೇಕು. ಮಕ್ಕಳು ರ‍್ಥವಾಗದ ವಿಷಯದಲ್ಲಿ ಗೊಂದಲಕ್ಕೆ ಒಳಗಾಗುತ್ತಾರೆ. ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ದಿನದ ಕರ‍್ಯ ಚಟುವಟಿಕೆ ಮತ್ತು ವೇಳಾಪಟ್ಟಿಯನ್ನು ಸುಲಭವಾಗಿ ರೂಪಿಸಿಕೊಳ್ಳಬೇಕು ಎಂದು ಸೂಚಿಸಿದರು.

ವಿವಿಧ ಮನೋಭಾವದ ಕಲಿಕರ‍್ಥಿಗಳಿರುತ್ತಾರೆ. ನೋಡಿ ಕಲಿಯುವವರು, ಕೇಳಿ ಕಲಿಯುವವರು, ಖಿನ್ನತೆಗೆ ಒಳಗಾದವರು, ಕೌಟುಂಬಿಕ ಸಮಸ್ಯೆಯಲ್ಲಿನ ವಿದ್ಯರ‍್ಥಿಗಳು ಅಂತಹ ವಿದ್ಯರ‍್ಥಿಗಳಿಗೆ ಹೆಚ್ಚಿನ ಒತ್ತು ನೀಡಬೇಕು ಮತ್ತು ಆತ್ಮ ಗೌರವ ಹೆಚ್ಚಿಸಿದರೆ ಮಾತ್ರ ಕಲಿಕೆಗೆ ರ‍್ಥ ನೀಡಿದಂತೆ ಆಗುತ್ತದೆ ಎಂದರು.
ಕರ‍್ಯಕ್ರಮದಲ್ಲಿ ಮಂಗಳೂರು ಸಿ.ಟಿ.ಇ.ಯ ಪ್ರಾಂಶುಪಾಲ ಸಿಪ್ರಿಯಾನ್ ಮೆಂತೆರೋ, ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ, ವಿವಿಧ ತಾಲೂಕು ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸರ‍್ವಜನಿಕ ಶಿಕ್ಷಣ ಇಲಾಖೆಯ ಉಪ ನರ‍್ದೇಶಕ ಎನ್.ಹೆಚ್ ನಾಗೂರ ಸ್ವಾಗತಿಸಿದರು, ಉಡುಪಿ ಡಯಟ್‌ನ ಉಪ ಪ್ರಾಂಶುಪಾಲ ಅಶೋಕ ಕಾಮತ್ ವಂದಿಸಿದರು. ಡಿವೈಪಿಸಿ ಪ್ರಭಾಕರ ಮಿತ್ಯಂತ ನಿರೂಪಿಸಿದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago