ಉಡುಪಿ : ಜ್ಞಾನವೆಂಬುದು ಹರಿಯುವ ನೀರಾಗಿದ್ದು, ಶಿಕ್ಷಕರು ಓದುವ ಹವ್ಯಾಸ ಬೆಳೆಸಿಕೊಳ್ಳುವುದರೊಂದಿಗೆ ಹೆಚ್ಚು ಜ್ಞಾನ ಹೊಂದಿ ಮಕ್ಕಳಿಗೆ ಕ್ರಿಯಾತ್ಮಕ ಚಟುವಟಿಕೆಗಳೊಂದಿಗೆ ಬೋಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಅವರು ಇಂದು ನಗರದ ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಆಯೋಜಿಸಿದ ಪ್ರೇರಣಾ ಕರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂದು ಪ್ರಪಂಚ ಹತ್ತು ರ್ಷಕ್ಕೊಮ್ಮೆ ಬದಲಾಗುತ್ತಿದೆ. ವಾತಾವರಣ , ಹವಾಮಾನ, ಜೀವನಶೈಲಿಯಲ್ಲಿ ಇದನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರು ವಿದ್ಯರ್ಥಿಗಳಿಗೆ ಮುಂದಿನ ಇಪ್ಪತ್ತು ರ್ಷದ ಜ್ಞಾನಾಧಾರಿತ ಶಿಕ್ಷಣವನ್ನು ನೀಡಬೇಕು. ಆಗ ಮಾತ್ರ ಶಿಕ್ಷಣದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದರು.
ಸಂವಿಧಾನ ನಮಗೆ ಮೂಲಭೂತ ರ್ತವ್ಯಗಳನ್ನು ಕೊಟ್ಟಿದೆ. ಆ ರ್ತವ್ಯದಲ್ಲಿ ಶ್ರೇಷ್ಠತೆ ಇದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಶಿಸ್ತುಬದ್ಧ ಶಿಕ್ಷಣದ ಜೊತೆಗೆ ಶಾಲೆಯ ಪರಿಸರವು ಕೂಡ ಅಷ್ಟೇ ಸ್ವಚ್ಛಂಧವಾಗಿರಬೇಕು. ಈ ತರಹದ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಯಾವುದೇ ಕೊರತೆ ಇಲ್ಲ. ಸಿ.ಎಸ್.ಆರ್ ಫಂಡ್ ನೀಡಲು ಜಿಲ್ಲೆಯಲ್ಲಿ ಸುಮಾರು ಕರ್ಪೋರೇಟ್ ಸಂಸ್ಥೆಗಳಿವೆ. ಅವುಗಳ ನೆರವು ಪಡೆಯಬಹುದು ಎಂದರು, ಶಾಲೆಗಳಲ್ಲಿ ಅಶಿಸ್ತಿನ ವಾತಾವರಣ ಕಂಡುಬಂದಲ್ಲಿ ಅಂತಹ ಶಾಲಾ ಮುಖ್ಯಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಒಟ್ಟು ೨೬೧ ಪ್ರೌಢಶಾಲೆಗಳಿದ್ದು, ಅದರಲ್ಲಿ ೧೦೬ ಸರಕಾರಿ ಪ್ರೌಢಶಾಲೆಗಳು, ೭೦ ಅನುದಾನಿತ ಹಾಗೂ ೮೫ ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಒಟ್ಟು ೧೩,೫೫೮ ಎಸ್.ಎಸ್.ಎಲ್.ಸಿ ವಿದ್ಯರ್ಥಿಗಳು ಪ್ರಸಕ್ತ ಸಾಲಿನಲ್ಲಿ ಓದುತ್ತಿದ್ದು, ವಿದ್ಯಾಭ್ಯಾಸಕ್ಕೆ ಯಾವುದೇ ಅಡೆ-ತಡೆಯಾಗದಂತೆ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರೊಂದಿಗೆ ಉತ್ತಮ ಜ್ಞಾನಾಧರಿತ ಶಿಕ್ಷಣ ನೀಡುವುದರೊಂದಿಗೆ ಜಿಲ್ಲೆಗೆ ಹೆಸರು ತರುವಂತಾಗಬೇಕು ಎಂದರು.
ಜಿಲ್ಲಾ ಪಂಚಾಯತ್ನ ಮುಖ್ಯಕರ್ಯನರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಕರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಭವಿಷ್ಯ ಶಿಕ್ಷಕರ ಮೇಲಿರುತ್ತದೆ. ಮಕ್ಕಳ ಶಿಕ್ಷಣದ ಕೊರತೆ ಹಾಗೂ ಮನಸ್ಥಿತಿ ಅರಿತು ಬೋಧನೆ ಮಾಡಬೇಕು. ವಿದ್ಯರ್ಥಿಗಳ ವಿದ್ಯಾಭ್ಯಾಸಕ್ಕೆ ಶಾಲಾ ಶಿಕ್ಷಕರು ಪೂರಕ ವಾತಾವರಣವನ್ನು ಕಲ್ಪಿಸುವುದರೊಂದಿಗೆ ಉತ್ತಮ ಶಿಕ್ಷಣವನ್ನು ನೀಡಬೇಕೆಂದು ಹೇಳಿದರು.
ಹಿರಿಯ ಉಪನ್ಯಾಸಕ ಹರಿಪ್ರಸಾದ್ ಮಾತನಾಡಿ, ಮಕ್ಕಳಿಗೆ ಪಾಠ ಮಾಡುವ ಮೊದಲು ಅವರ ಮನಸ್ಸನ್ನು ಏಕಾಗ್ರತೆಗೆ ಒಳಪಡಿಸಬೇಕು. ಮಕ್ಕಳು ರ್ಥವಾಗದ ವಿಷಯದಲ್ಲಿ ಗೊಂದಲಕ್ಕೆ ಒಳಗಾಗುತ್ತಾರೆ. ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ದಿನದ ಕರ್ಯ ಚಟುವಟಿಕೆ ಮತ್ತು ವೇಳಾಪಟ್ಟಿಯನ್ನು ಸುಲಭವಾಗಿ ರೂಪಿಸಿಕೊಳ್ಳಬೇಕು ಎಂದು ಸೂಚಿಸಿದರು.
ವಿವಿಧ ಮನೋಭಾವದ ಕಲಿಕರ್ಥಿಗಳಿರುತ್ತಾರೆ. ನೋಡಿ ಕಲಿಯುವವರು, ಕೇಳಿ ಕಲಿಯುವವರು, ಖಿನ್ನತೆಗೆ ಒಳಗಾದವರು, ಕೌಟುಂಬಿಕ ಸಮಸ್ಯೆಯಲ್ಲಿನ ವಿದ್ಯರ್ಥಿಗಳು ಅಂತಹ ವಿದ್ಯರ್ಥಿಗಳಿಗೆ ಹೆಚ್ಚಿನ ಒತ್ತು ನೀಡಬೇಕು ಮತ್ತು ಆತ್ಮ ಗೌರವ ಹೆಚ್ಚಿಸಿದರೆ ಮಾತ್ರ ಕಲಿಕೆಗೆ ರ್ಥ ನೀಡಿದಂತೆ ಆಗುತ್ತದೆ ಎಂದರು.
ಕರ್ಯಕ್ರಮದಲ್ಲಿ ಮಂಗಳೂರು ಸಿ.ಟಿ.ಇ.ಯ ಪ್ರಾಂಶುಪಾಲ ಸಿಪ್ರಿಯಾನ್ ಮೆಂತೆರೋ, ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ, ವಿವಿಧ ತಾಲೂಕು ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸರ್ವಜನಿಕ ಶಿಕ್ಷಣ ಇಲಾಖೆಯ ಉಪ ನರ್ದೇಶಕ ಎನ್.ಹೆಚ್ ನಾಗೂರ ಸ್ವಾಗತಿಸಿದರು, ಉಡುಪಿ ಡಯಟ್ನ ಉಪ ಪ್ರಾಂಶುಪಾಲ ಅಶೋಕ ಕಾಮತ್ ವಂದಿಸಿದರು. ಡಿವೈಪಿಸಿ ಪ್ರಭಾಕರ ಮಿತ್ಯಂತ ನಿರೂಪಿಸಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…