Featured

ಮಕ್ಕಳ ಕಳ್ಳಸಾಗಣೆ  : ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ – ಸಿಬಿಐ ದಾಳಿ ; ನವಜಾತ ಶಿಶುಗಳ ರಕ್ಷಣೆ – Vishwanews24

ಮಕ್ಕಳ ಕಳ್ಳಸಾಗಣೆ  : ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ – ಸಿಬಿಐ ದಾಳಿ ಮಾಡಿ ನವಜಾತ ಶಿಶುಗಳ ರಕ್ಷಣೆ

ನವದೆಹಲಿ: ಮಕ್ಕಳ ಕಳ್ಳಸಾಗಣೆ  ಪ್ರಕರಣ ಸಂಬಂಧ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ಪ್ರಕರಣ ಸಂಬಂಧ ಕೆಲವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಬಂಧಿತರಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ. ಶುಕ್ರವಾರ ಸಂಜೆ ದೆಹಲಿ-ಎನ್‌ಸಿಆರ್‌ನ ಹಲವೆಡೆ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ.

ಸದ್ಯ ಸಿಬಿಐ ತಂಡ ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಕೆಲವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ.

ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ: ಸಿಬಿಐ (CBI) ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾಹಿತಿ ಪ್ರಕಾರ ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ.

ದೆಹಲಿಯ ಕೆಲವು ದೊಡ್ಡ ಆಸ್ಪತ್ರೆಗಳಿಂದ ಮಕ್ಕಳು ಕಾಣೆಯಾಗಿದ್ದಾರೆ ಎಂಬ ವರದಿಗಳು ಬಂದಿವೆ. ನಂತರ ಸಿಬಿಐ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿ ಮಹಿಳೆ ಸೇರಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮಕ್ಕಳ ವ್ಯಾಪಾರದ ಬಗ್ಗೆ ಮಾಹಿತಿ ಪಡೆದ ಸಿಬಿಐ, ನಾಪತ್ತೆಯಾದ ಮಕ್ಕಳೊಂದಿಗೆ ಸಂಪರ್ಕ ಸಾಧಿಸಿ ದಾಳಿ ನಡೆಸಿತು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago