ರಾಜ್ಯ ನ್ಯೂಸ್

ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ರೆ ತಕ್ಷಣ ಅರೆಸ್ಟ್ ಮಾಡಿ : ಅಧಿಕಾರಿಗಳಿಗೆ ಸಿಎಂ ಖಡಕ್ ಆದೇಶ – vishwanews24

ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ರೆ ತಕ್ಷಣ ಅರೆಸ್ಟ್ ಮಾಡಿ : ಅಧಿಕಾರಿಗಳಿಗೆ ಸಿಎಂ ಖಡಕ್ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಬೆಳ್ಳಂಬೆಳಗ್ಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ರೈತರು, ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.

ಮಾರುಕಟ್ಟೆ ಪರಿಶೀಲನೆ ವೇಳೆ ಸುಮಾರು 7ರಿಂದ 10 ವರ್ಷ ವಯಸ್ಸಿನ ಮಕ್ಕಳು ಕೆಲಸ ಮಾಡುತ್ತಿರುವುದನ್ನು ಮುಖ್ಯಮಂತ್ರಿ ಗಮನಿಸಿದರು. ಇದನ್ನು ಕಂಡು ಬೇಸರ ವ್ಯಕ್ತಪಡಿಸಿದ ಅವರು, ಬಾಲ ಕಾರ್ಮಿಕ ಪದ್ಧತಿ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರು ಹಾಗೂ ಮಕ್ಕಳಿಂದ ಕೆಲಸ ಮಾಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಂಜೆಯೊಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬಾಲ ಕಾರ್ಮಿಕರ ವಿಚಾರದಲ್ಲಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ಸರ್ಕಲ್ ಇನ್‌ಸ್ಪೆಕ್ಟರ್, ಡಿವೈಎಸ್‌ಪಿ/ಎಸಿಪಿ ಹಾಗೂ ಡಿಸಿಪಿ ಮಟ್ಟದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಂಜೆಯೊಳಗೆ ಬಾಲ ಕಾರ್ಮಿಕರ ಸಮಸ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ : 2 ದಿನ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್‌ ರೇವಣ್ಣ – vishwanews24

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ : 2 ದಿನ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್‌ ರೇವಣ್ಣ ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ…

1 minute ago

ರೈತರ ವಿಮೆ ಹಣ ಬ್ಯಾಂಕಿಗೆ ಪಾವತಿ ಮಾಡದ ಸೊಸೈಟಿ ಕಾರ್ಯದರ್ಶಿ ವಜಾ: ಸಿಎಂ ಡಿ.ಕೆ.ಶಿ ಸೂಚನೆ – vishwanews24

ರೈತರ ವಿಮೆ ಹಣ ಬ್ಯಾಂಕಿಗೆ ಪಾವತಿ ಮಾಡದ ಸೊಸೈಟಿ ಕಾರ್ಯದರ್ಶಿ ವಜಾಗೊಳಿಸಲು ಸಿಎಂ ಸೂಚನೆ ಬೆಂಗಳೂರು: ಕಲಬುರಗಿ ಜೇವರ್ಗಿ ತಾಲ್ಲೂಕಿನ…

1 hour ago

ಉಡುಪಿ: ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ; ಕಠಿಣ ಕ್ರಮಕ್ಕೆ ಆಗ್ರಹ – vishwanews24

ಉಡುಪಿ: ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ; ಕಠಿಣ ಕ್ರಮಕ್ಕೆ CWC ಗೆ ಎಪಿಸಿಆರ್ ನಿಂದ ದೂರು ಉಡುಪಿ: ಉಡುಪಿ…

1 hour ago

ಒಂದು ವಾರದಲ್ಲಿ 3 ಕೋಟಿ ರೂ. ಮೌಲ್ಯದ ಆಹಾರ ವಸ್ತುಗಳು, ಎಕ್ಸ್​ಪೈರಿ ಔಷಧಗಳು ವಶಕ್ಕೆ: ಸಚಿವ ಯುಟಿ ಖಾದರ್ – vishwanews24

ಒಂದು ವಾರದಲ್ಲಿ 3 ಕೋಟಿ ರೂ. ಮೌಲ್ಯದ ಆಹಾರ ವಸ್ತುಗಳು, ಎಕ್ಸ್​ಪೈರಿ ಔಷಧಗಳು ವಶಕ್ಕೆ.. ಕರ್ನಾಟಕ ಸರ್ಕಾರವು ಸಾರ್ವಜನಿಕರ ಆರೋಗ್ಯ…

2 hours ago

108 ಆ್ಯಂಬುಲೆನ್ಸ್​ ವಾಹನ ಸಿಬ್ಬಂದಿಯಿಂದ ರಾಜೀನಾಮೆ ಎಚ್ಚರಿಕೆ: ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ಹೊಣೆ : ಅಶೋಕ್​​ – vishwanews24

108 ಆ್ಯಂಬುಲೆನ್ಸ್​ ವಾಹನ ಸಿಬ್ಬಂದಿಯಿಂದ ರಾಜೀನಾಮೆ ಎಚ್ಚರಿಕೆ: ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ಹೊಣೆ : ಅಶೋಕ್​​ ಬೆಂಗಳೂರು: ವಿವಿಧ ಬೇಡಿಕೆಗಳಿಗೆ…

2 hours ago

ವಿಟ್ಲ : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮೂವರ ಬಂಧನ- vishwanews24

ವಿಟ್ಲ : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮೂವರ ಬಂಧನ ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

3 hours ago