Featured

‘ಮಕ್ಕಳ ಜೀವ ಉಳಿಸಲು ಮಾನ್‌ಸ್ಟರ್‌ ವೇಷ’ ಹಾಕಲಿದ್ದಾರೆ ರವಿ ಕಟಪಾಡಿ

ಉಡುಪಿ: ವಿಟ್ಲಪಿಂಡಿ ಉತ್ಸವದ ದಿನ ಹುಲಿವೇಷ ಕುಣಿತ ನೋಡಲು ಉಡುಪಿಯ ಕಡೆಗೆ ಜನಸಾಗರವೇ ಹರಿದು ಬರುತ್ತದೆ. ಈ ಬಾರಿಯ ಜನ್ಮಾಷ್ಟಮಿಯ ಹುಲಿವೇಷ ಮಾನವೀಯ ಕಾರಣಗಳಿಂದಾಗಿ ಗಮನ ಸೆಳೆಯುತ್ತಿದೆ.

ಕಳೆದ 4 ವರ್ಷಗಳಿಂದ ಅಷ್ಟಮಿಯ ಸಂದರ್ಭ ವಿಚಿತ್ರ ವೇಷಗಳನ್ನು ಹಾಕುತ್ತಾ ದಾನಿಗಳಿಂದ ದೊರೆತ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿದ್ದಾರೆ ಕಲಾವಿದ ರವಿ ಕಟಪಾಡಿ. ಈ ಬಾರಿಯೂ ಅವರು ನಾಲ್ಕು ಮಕ್ಕಳ ವೈದ್ಯಕೀಯ ವೆಚ್ಚ ಭರಿಸುವ ಸಂಕಲ್ಪದೊಂದಿಗೆ ಅಮೇಸಿಂಗ್ ಮಾನ್‌ಸ್ಟರ್‌ ವೇಷ ಹಾಕಲಿದ್ದಾರೆ.‌

ಇದೊಂದು ಭಯಾನಕ, ರಾಕ್ಷಸ ವೇಷ. ಈಗಾಗಲೇ ವೇಷ ಹಾಕಲು ಬೇಕಾದ ಸಾಮಾಗ್ರಿಗಳನ್ನು ಹಾಕಾಂಗ್‌ನಿಂದ ತರಿಸಿಕೊಂಡಿದ್ದೇನೆ. ಮೂರು ದಿನ ವೇಷ ಹಾಕಿಕೊಂಡು ಉಡುಪಿ, ಮಲ್ಪೆ, ಕಟಪಾಡಿ, ಪಡುಕೆರೆ ಭಾಗದಲ್ಲಿ ಸಂಚರಿಸುತ್ತೇನೆ. ದಾನಿಗಳು ಕೈಲಾದಷ್ಟು ಆರ್ಥಿಕ ನೆರವು ನೀಡಿದರೆ ನಾಲ್ಕು ಮಕ್ಕಳ ಜೀವ ಉಳಿಸಬಹುದು ಎನ್ನುತ್ತಾರೆ ಅವರು.

ರವಿ ಕಟಪಾಡಿ ನಾಲ್ಕು ವರ್ಷಗಳಿಂದ ಚಿತ್ರ–ವಿಚಿತ್ರ ವೇಷ ಹಾಕುತ್ತಾ ಬಂದಿದ್ದಾರೆ. ವೇಷಕ್ಕೆ ಬಳಸುವ ರಸಾಯನಿಕಗಳ ದುಷ್ಪರಿಣಾಮದಿಂದಾಗಿ ಹಲವು ಬಾರಿ ಅನಾರೋಗ್ಯಕ್ಕೂ ತುತ್ತಾಗಿದ್ದಾರೆ. 2016ರಲ್ಲಿ ಮೈಗೆ ಹಚ್ಚಿಕೊಂಡಿದ್ದ ಕೆಮಿಕಲ್ ಬೆನ್ನು, ಮುಖದ ಚರ್ಮವೆಲ್ಲ ಸುಟ್ಟು ಹಾಕಿತ್ತು. ಆದರೂ, ವೇಷ ಹಾಕುವುದನ್ನು ಮಾತ್ರ ರವಿ ನಿಲ್ಲಿಸಿಲ್ಲ.

ಸಾವು–ಬದುಕಿನ ಮಧ್ಯೆ ಹೋರಾಡುವ ಮಕ್ಕಳ ನೋವಿನ ಮುಂದೆ, ವಾರವೊ, ತಿಂಗಳೊ ಅನುಭವಿಸುವ ನನ್ನ ನೋವು ದೊಡ್ಡದಲ್ಲ. ಬಡತನದಿಂದ ಬೇಗೆಯಿಂದ ಬೆಂದಿರುವ ನನಗೆ ದುಡ್ಡಿನ ಬೆಲೆ ತಿಳಿದಿದೆ. ಮಕ್ಕಳು ಸಾವಿನ ದವಡೆಯಲ್ಲಿದ್ದಾಗ ಪೋಷಕರು ಅನುಭವಿಸುವ ಯಾತನೆಯ ಅರಿವಿದೆ. ಹಾಗಾಗಿ, ಎಷ್ಟೆ ಕಷ್ಟವಾದರೂ ವೇಷ ಹಾಕಿಯೇ ತೀರುತ್ತೇನೆ ಎನ್ನುತ್ತಾರೆ ರವಿ.

ವೇಷ ಧರಿಸಲು 20 ಗಂಟೆ ಹಿಡಿಯುತ್ತದೆ. 3 ದಿನ ಘನ ಆಹಾರವನ್ನು ಸೇವಿಸಲಾಗುವುದಿಲ್ಲ. ಸ್ಟ್ರಾ ಮೂಲಕ ಎಳನೀರು, ನೀರು ಸೇರಿದಂತೆ ದ್ರವ ಆಹಾರ ಮಾತ್ರ ತೆಗೆದುಕೊಳ್ಳಬೇಕು. ಇದಕ್ಕೆಲ್ಲ ನನ್ನ ಗೆಳೆಯರ ಬಳಗ ಸಿದ್ಧತೆ ಮಾಡಿಕೊಂಡಿದೆ ಎನ್ನುತ್ತಾರೆ ರವಿ.‌

ಈ ಬಾರಿ ದಾನಿಗಳು ನೀಡಿದ ಹಣವನ್ನು ಸೆ.9ರಂದು ಮಲ್ಪೆಯ ಹನುಮಾನ್ ಭಜನಾ ಮಂದಿರದಲ್ಲಿ ಮಧ್ಯಾಹ್ನ 4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿತರಿಸಲಾಗುವುದು. ದಾನಮಾಡಲು ಇಚ್ಚಿಸುವವರು

ವಿಜಯ ಬ್ಯಾಂಕ್ ಖಾತೆ 117206331000013,

ಐಎಫ್ಎಸ್ ‌ಸಿ ಕೋಡ್ :  ವಿಐಜೆಬಿ 0001172

ಖಾತೆಗೆ ಹಣ ಸಂದಾಯ ಮಾಡಬಹುದು ಎಂದು ಅವರು ಮನವಿ ಮಾಡಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago