ಉಡುಪಿ: ವಿಟ್ಲಪಿಂಡಿ ಉತ್ಸವದ ದಿನ ಹುಲಿವೇಷ ಕುಣಿತ ನೋಡಲು ಉಡುಪಿಯ ಕಡೆಗೆ ಜನಸಾಗರವೇ ಹರಿದು ಬರುತ್ತದೆ. ಈ ಬಾರಿಯ ಜನ್ಮಾಷ್ಟಮಿಯ ಹುಲಿವೇಷ ಮಾನವೀಯ ಕಾರಣಗಳಿಂದಾಗಿ ಗಮನ ಸೆಳೆಯುತ್ತಿದೆ.
ಕಳೆದ 4 ವರ್ಷಗಳಿಂದ ಅಷ್ಟಮಿಯ ಸಂದರ್ಭ ವಿಚಿತ್ರ ವೇಷಗಳನ್ನು ಹಾಕುತ್ತಾ ದಾನಿಗಳಿಂದ ದೊರೆತ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿದ್ದಾರೆ ಕಲಾವಿದ ರವಿ ಕಟಪಾಡಿ. ಈ ಬಾರಿಯೂ ಅವರು ನಾಲ್ಕು ಮಕ್ಕಳ ವೈದ್ಯಕೀಯ ವೆಚ್ಚ ಭರಿಸುವ ಸಂಕಲ್ಪದೊಂದಿಗೆ ಅಮೇಸಿಂಗ್ ಮಾನ್ಸ್ಟರ್ ವೇಷ ಹಾಕಲಿದ್ದಾರೆ.
ಇದೊಂದು ಭಯಾನಕ, ರಾಕ್ಷಸ ವೇಷ. ಈಗಾಗಲೇ ವೇಷ ಹಾಕಲು ಬೇಕಾದ ಸಾಮಾಗ್ರಿಗಳನ್ನು ಹಾಕಾಂಗ್ನಿಂದ ತರಿಸಿಕೊಂಡಿದ್ದೇನೆ. ಮೂರು ದಿನ ವೇಷ ಹಾಕಿಕೊಂಡು ಉಡುಪಿ, ಮಲ್ಪೆ, ಕಟಪಾಡಿ, ಪಡುಕೆರೆ ಭಾಗದಲ್ಲಿ ಸಂಚರಿಸುತ್ತೇನೆ. ದಾನಿಗಳು ಕೈಲಾದಷ್ಟು ಆರ್ಥಿಕ ನೆರವು ನೀಡಿದರೆ ನಾಲ್ಕು ಮಕ್ಕಳ ಜೀವ ಉಳಿಸಬಹುದು ಎನ್ನುತ್ತಾರೆ ಅವರು.
ರವಿ ಕಟಪಾಡಿ ನಾಲ್ಕು ವರ್ಷಗಳಿಂದ ಚಿತ್ರ–ವಿಚಿತ್ರ ವೇಷ ಹಾಕುತ್ತಾ ಬಂದಿದ್ದಾರೆ. ವೇಷಕ್ಕೆ ಬಳಸುವ ರಸಾಯನಿಕಗಳ ದುಷ್ಪರಿಣಾಮದಿಂದಾಗಿ ಹಲವು ಬಾರಿ ಅನಾರೋಗ್ಯಕ್ಕೂ ತುತ್ತಾಗಿದ್ದಾರೆ. 2016ರಲ್ಲಿ ಮೈಗೆ ಹಚ್ಚಿಕೊಂಡಿದ್ದ ಕೆಮಿಕಲ್ ಬೆನ್ನು, ಮುಖದ ಚರ್ಮವೆಲ್ಲ ಸುಟ್ಟು ಹಾಕಿತ್ತು. ಆದರೂ, ವೇಷ ಹಾಕುವುದನ್ನು ಮಾತ್ರ ರವಿ ನಿಲ್ಲಿಸಿಲ್ಲ.
ಸಾವು–ಬದುಕಿನ ಮಧ್ಯೆ ಹೋರಾಡುವ ಮಕ್ಕಳ ನೋವಿನ ಮುಂದೆ, ವಾರವೊ, ತಿಂಗಳೊ ಅನುಭವಿಸುವ ನನ್ನ ನೋವು ದೊಡ್ಡದಲ್ಲ. ಬಡತನದಿಂದ ಬೇಗೆಯಿಂದ ಬೆಂದಿರುವ ನನಗೆ ದುಡ್ಡಿನ ಬೆಲೆ ತಿಳಿದಿದೆ. ಮಕ್ಕಳು ಸಾವಿನ ದವಡೆಯಲ್ಲಿದ್ದಾಗ ಪೋಷಕರು ಅನುಭವಿಸುವ ಯಾತನೆಯ ಅರಿವಿದೆ. ಹಾಗಾಗಿ, ಎಷ್ಟೆ ಕಷ್ಟವಾದರೂ ವೇಷ ಹಾಕಿಯೇ ತೀರುತ್ತೇನೆ ಎನ್ನುತ್ತಾರೆ ರವಿ.
ವೇಷ ಧರಿಸಲು 20 ಗಂಟೆ ಹಿಡಿಯುತ್ತದೆ. 3 ದಿನ ಘನ ಆಹಾರವನ್ನು ಸೇವಿಸಲಾಗುವುದಿಲ್ಲ. ಸ್ಟ್ರಾ ಮೂಲಕ ಎಳನೀರು, ನೀರು ಸೇರಿದಂತೆ ದ್ರವ ಆಹಾರ ಮಾತ್ರ ತೆಗೆದುಕೊಳ್ಳಬೇಕು. ಇದಕ್ಕೆಲ್ಲ ನನ್ನ ಗೆಳೆಯರ ಬಳಗ ಸಿದ್ಧತೆ ಮಾಡಿಕೊಂಡಿದೆ ಎನ್ನುತ್ತಾರೆ ರವಿ.
ಈ ಬಾರಿ ದಾನಿಗಳು ನೀಡಿದ ಹಣವನ್ನು ಸೆ.9ರಂದು ಮಲ್ಪೆಯ ಹನುಮಾನ್ ಭಜನಾ ಮಂದಿರದಲ್ಲಿ ಮಧ್ಯಾಹ್ನ 4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿತರಿಸಲಾಗುವುದು. ದಾನಮಾಡಲು ಇಚ್ಚಿಸುವವರು
ವಿಜಯ ಬ್ಯಾಂಕ್ ಖಾತೆ 117206331000013,
ಐಎಫ್ಎಸ್ ಸಿ ಕೋಡ್ : ವಿಐಜೆಬಿ 0001172
ಖಾತೆಗೆ ಹಣ ಸಂದಾಯ ಮಾಡಬಹುದು ಎಂದು ಅವರು ಮನವಿ ಮಾಡಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…