ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.
ಹೆಣ್ಣು ಅಥವಾ ಗಂಡು ಎನ್ನದೆ ಒಟ್ಟು ಶೇ. 39 ಜನಸಂಖ್ಯೆಗೆ ಅಥವಾ 43 ಕೋಟಿ ಮಕ್ಕಳಿಗೆ ಕಾನೂನಿನ ರಕ್ಷಣೆಯನ್ನು ಈ ಮಸೂದೆ ಒದಗಿಸಲಿದೆ ಎಂದು ಅವರು ಹೇಳಿದರು. ಈ ಮಸೂದೆ ಮಕ್ಕಳ ಅಶ್ಲೀಲ ಚಿತ್ರಗಳ ಬಗ್ಗೆ ಕೂಡ ವ್ಯಾಖ್ಯಾನಿಸುತ್ತದೆ. ಆದುದರಿಂದ ಇಂತಹ ಹೇಯ ಅಪರಾಧದಲ್ಲಿ ತೊಡಗುವ ವಿಕೃತ ಕಾಮಿಗಳನ್ನು ಈ ಮಸೂದೆ ಶಿಕ್ಷಿಸುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…