Featured

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ಶಿಕ್ಷೆ ; ಲೋಕಸಭೆಯಲ್ಲಿ ಮಸೂದೆ ಅಂಗೀಕಾರ -Vishwanews24

ನವದೆಹಲಿ: ಮಕ್ಕಳ ಮೇಲಿನ ಹೀನ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನನ್ನು ಒಳಗೊಂಡಿರುವ ‘ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೋ)’ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.
ಇದು ಅಪ್ರಾಪ್ತರ ವಿರುದ್ಧದ ಇತರ ಅಪರಾಧಗಳಿಗೂ ಕಠಿಣ ಶಿಕ್ಷೆ ನೀಡುವ ಅಂಶಗಳನ್ನು ಒಳಗೊಂಡಿದೆ. ಮಸೂದೆ ಮಂಡಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ, ಈ ಕರಡು ಪ್ರತಿಯಿಂದ ದೇಶದ 47 ಕೋಟಿ ಜನರು ರಕ್ಷಣೆ ಪಡೆಯಲಿದ್ದಾರೆ. ಕರಡು ಮಸೂದೆಯನ್ನು ಈಗಾಗಲೇ ರಾಜ್ಯಸಭೆ ಅಂಗೀಕರಿಸಿದೆ. ಈ ತಿದ್ದುಪಡಿ ಭಾರತೀಯ ದಂಡ ಸಂಹಿತೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲಿದೆ ಎಂದರು.
ಪೋಕ್ಸೋ ಕಾಯ್ದೆ ಲಿಂಗಭೇದವಿಲ್ಲದೆ ಅಪ್ರಾಪ್ತ ಮಕ್ಕಳ ಮೇಲಿನ ಅಪರಾಧಗಳಿಗೆ ಶಿಕ್ಷ ಒದಗಿಸುತ್ತದೆ. ಇದು ಮಕ್ಕಳ ಅಶ್ಲೀಲ ಚಿತ್ರಗಳಿಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸುತ್ತದೆ. ಇಂದಿನ ಸಮಾಜದಲ್ಲಿ ಇಂತಹ ಮಸೂದೆ ಜಾರಿಗೊಳಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್‌ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್‌ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.

ಹೆಣ್ಣು ಅಥವಾ ಗಂಡು ಎನ್ನದೆ ಒಟ್ಟು ಶೇ. 39 ಜನಸಂಖ್ಯೆಗೆ ಅಥವಾ 43 ಕೋಟಿ ಮಕ್ಕಳಿಗೆ ಕಾನೂನಿನ ರಕ್ಷಣೆಯನ್ನು ಈ ಮಸೂದೆ ಒದಗಿಸಲಿದೆ ಎಂದು ಅವರು ಹೇಳಿದರು. ಈ ಮಸೂದೆ ಮಕ್ಕಳ ಅಶ್ಲೀಲ ಚಿತ್ರಗಳ ಬಗ್ಗೆ ಕೂಡ ವ್ಯಾಖ್ಯಾನಿಸುತ್ತದೆ. ಆದುದರಿಂದ ಇಂತಹ ಹೇಯ ಅಪರಾಧದಲ್ಲಿ ತೊಡಗುವ ವಿಕೃತ ಕಾಮಿಗಳನ್ನು ಈ ಮಸೂದೆ ಶಿಕ್ಷಿಸುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago