Featured

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ಶಿಕ್ಷೆ ; ಲೋಕಸಭೆಯಲ್ಲಿ ಮಸೂದೆ ಅಂಗೀಕಾರ -Vishwanews24

ನವದೆಹಲಿ: ಮಕ್ಕಳ ಮೇಲಿನ ಹೀನ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನನ್ನು ಒಳಗೊಂಡಿರುವ ‘ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೋ)’ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.
ಇದು ಅಪ್ರಾಪ್ತರ ವಿರುದ್ಧದ ಇತರ ಅಪರಾಧಗಳಿಗೂ ಕಠಿಣ ಶಿಕ್ಷೆ ನೀಡುವ ಅಂಶಗಳನ್ನು ಒಳಗೊಂಡಿದೆ. ಮಸೂದೆ ಮಂಡಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ, ಈ ಕರಡು ಪ್ರತಿಯಿಂದ ದೇಶದ 47 ಕೋಟಿ ಜನರು ರಕ್ಷಣೆ ಪಡೆಯಲಿದ್ದಾರೆ. ಕರಡು ಮಸೂದೆಯನ್ನು ಈಗಾಗಲೇ ರಾಜ್ಯಸಭೆ ಅಂಗೀಕರಿಸಿದೆ. ಈ ತಿದ್ದುಪಡಿ ಭಾರತೀಯ ದಂಡ ಸಂಹಿತೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲಿದೆ ಎಂದರು.
ಪೋಕ್ಸೋ ಕಾಯ್ದೆ ಲಿಂಗಭೇದವಿಲ್ಲದೆ ಅಪ್ರಾಪ್ತ ಮಕ್ಕಳ ಮೇಲಿನ ಅಪರಾಧಗಳಿಗೆ ಶಿಕ್ಷ ಒದಗಿಸುತ್ತದೆ. ಇದು ಮಕ್ಕಳ ಅಶ್ಲೀಲ ಚಿತ್ರಗಳಿಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸುತ್ತದೆ. ಇಂದಿನ ಸಮಾಜದಲ್ಲಿ ಇಂತಹ ಮಸೂದೆ ಜಾರಿಗೊಳಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್‌ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್‌ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.

ಹೆಣ್ಣು ಅಥವಾ ಗಂಡು ಎನ್ನದೆ ಒಟ್ಟು ಶೇ. 39 ಜನಸಂಖ್ಯೆಗೆ ಅಥವಾ 43 ಕೋಟಿ ಮಕ್ಕಳಿಗೆ ಕಾನೂನಿನ ರಕ್ಷಣೆಯನ್ನು ಈ ಮಸೂದೆ ಒದಗಿಸಲಿದೆ ಎಂದು ಅವರು ಹೇಳಿದರು. ಈ ಮಸೂದೆ ಮಕ್ಕಳ ಅಶ್ಲೀಲ ಚಿತ್ರಗಳ ಬಗ್ಗೆ ಕೂಡ ವ್ಯಾಖ್ಯಾನಿಸುತ್ತದೆ. ಆದುದರಿಂದ ಇಂತಹ ಹೇಯ ಅಪರಾಧದಲ್ಲಿ ತೊಡಗುವ ವಿಕೃತ ಕಾಮಿಗಳನ್ನು ಈ ಮಸೂದೆ ಶಿಕ್ಷಿಸುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago