ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.
ಹೆಣ್ಣು ಅಥವಾ ಗಂಡು ಎನ್ನದೆ ಒಟ್ಟು ಶೇ. 39 ಜನಸಂಖ್ಯೆಗೆ ಅಥವಾ 43 ಕೋಟಿ ಮಕ್ಕಳಿಗೆ ಕಾನೂನಿನ ರಕ್ಷಣೆಯನ್ನು ಈ ಮಸೂದೆ ಒದಗಿಸಲಿದೆ ಎಂದು ಅವರು ಹೇಳಿದರು. ಈ ಮಸೂದೆ ಮಕ್ಕಳ ಅಶ್ಲೀಲ ಚಿತ್ರಗಳ ಬಗ್ಗೆ ಕೂಡ ವ್ಯಾಖ್ಯಾನಿಸುತ್ತದೆ. ಆದುದರಿಂದ ಇಂತಹ ಹೇಯ ಅಪರಾಧದಲ್ಲಿ ತೊಡಗುವ ವಿಕೃತ ಕಾಮಿಗಳನ್ನು ಈ ಮಸೂದೆ ಶಿಕ್ಷಿಸುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…