Featured

ಮಗಳು ಬಿಜೆಪಿ ಸೇರಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ : ಕಾಗೋಡು ತಿಮ್ಮಪ್ಪ – Vishwanews24

ಮಗಳು ಬಿಜೆಪಿ ಸೇರಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ : ಕಾಗೋಡು ತಿಮ್ಮಪ್ಪ

ಶಿವಮೊಗ್ಗ: ಮಗಳು ಬಿಜೆಪಿ ಸೇರಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ. ಆಕೆ ಈ ರೀತಿ ಮಾಡುತ್ತಾಳೆ ಎಂದು ನಾನು ಕನಸಿನಲ್ಲಿಯೂ ಆಲೋಚನೆ ಮಾಡಿರಲಿಲ್ಲ. ಮಗಳು ಈ ರೀತಿ ಇದ್ದಾಳೆ ಎನ್ನುವುದು ನನ್ನ ದೌರ್ಭಾಗ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರಿ ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಬೇಸರ ವ್ಯಕ್ತಪಡಿಸಿದರು. ಈ ಸುದ್ದಿ ನನಗೆ ಈಗಷ್ಟೇ ಗೊತ್ತಾಗಿದೆ. ಈ ರೀತಿ ಮಾಡುತ್ತಾರೆ ಎಂದು ನಾನು ಕನಸಿನಲ್ಲಿಯೂ ಆಲೋಚಿಸಿರಲಿಲ್ಲ. ನಾನು ರಾಜಕಾರಣದಲ್ಲಿ ಸ್ಥಿರತೆ ಮತ್ತು ಬದ್ಧತೆ ಉಳಿಸಿಕೊಂಡು ಬಂದವನು. ನಾವು ಅದನ್ನೇ ಅನುಸರಿಸಿಕೊಂಡು ಕಾರ್ಯರೂಪಕ್ಕೆ ತರುತ್ತಿದ್ದೇವೆ. ಆ ಸಂತೋಷ ಮತ್ತು ನೆಮ್ಮದಿ ನಮಗಿದೆ ಎಂದರು.

ಏನೇ ಆದರೂ ನಾನು ಕಾಂಗ್ರೆಸ್  ಬಿಟ್ಟು ಹೋಗುವುದಿಲ್ಲ. ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಹಾಗೂ ಅದರ ಪರವಾಗಿ ಕೆಲಸ ಮಾಡುತ್ತೇನೆ. ಮಗಳಿಗೆ ಯಾರೋ ಹಿಂದಿನಿಂದ ಈ ರೀತಿ ಮಾಡಿಸಿದ್ದಾರೆ. . ಅವಳನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಅವಳು ತನ್ನ ಬಳಿ ಯಾವುದೇ ಬೇಸರ ಹೇಳಿಕೊಂಡಿಲ್ಲ. ನಾನು ಅವಳನ್ನು ಖರ್ಗೆ  ಹತ್ತಿರ ಕರೆದುಕೊಂಡು ಹೋಗಿದ್ದೆ. ಅವಕಾಶ ಇದ್ದರೆ ನೋಡೋಣ ಎಂದಿದ್ದರು. ಕಾಂಗ್ರೆಸ್‌ನಲ್ಲಿಯೇ ಇದ್ದು ರಾಜಕೀಯವಾಗಿ ಬೆಳೆಯಬಹುದಾಗಿತ್ತು. ನನ್ನ ಹತ್ತಿರ ಯಾವುದನ್ನೂ ಹೇಳಿಕೊಂಡಿಲ್ಲ ಎಂದು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago