Featured

ಮಗಳ ಮದುವೆಗಾಗಿ 30 ದಿನಗಳ ಪೆರೋಲ್ ಮೇಲೆ ಹೊರಬಂದ ರಾಜೀವ್‌ ಗಾಂಧಿ ಹಂತಕಿ ನಳಿನಿ -Vishwanews24

ನವದೆಹಲಿ: ಮಾಜಿ ಪ್ರಧಾನಿ ರಾಜೀವಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ವೆಲ್ಲೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‌ಗೆ ಮದ್ರಾಸ್‌ ಹೈಕೋರ್ಟ್‌ 30 ದಿನಗಳ ಪೆರೋಲ್‌ ಮಂಜೂರು ಮಾಡಿದೆ.

ಜುಲೈ 5 ರಂದು ಪರೋಲ್‌ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್‌ 1 ತಿಂಗಳ ಷರತ್ತು ಬದ್ಧ ಪರೋಲ್‌ಗೆ ಅನುಮತಿ ನೀಡಿದೆ. ಪೆರೋಲ್ಗಾಗಿ ನಳಿನಿಯೇ ವಾದ ಮಂಡಿಸಿದಳು. ಆರು ತಿಂಗಳ ಅವಧಿ ಬಿಡುಗಡೆ ಕೋರಿ ನಳಿನಿ ಮನವಿ ಮಾಡಿದ್ದಳು. ‘ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ತಮ್ಮನ್ನು ತಪ್ಪಾಗಿ ಶಿಕ್ಷೆಗೆ ಗುರಿಯಾಗಿಸಲಾಗಿದೆ. ತಾಯಿಯಾಗಿ ನನ್ನ ಜವಾಬ್ದಾರಿಯನ್ನು ಪೂರೈಸಬೇಕಿದೆ. ನನ್ನ ಮಗಳ ಮದುವೆ ಸಲುವಾಗಿ ನನ್ನ ಕುಟುಂಬವನ್ನು ಭೇಟಿಯಾಗಬೇಕಿದೆ, ಅಲ್ಲದೆ ದುಡ್ಡಿನ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಅದಕ್ಕೆ 6 ತಿಂಗಳ ಪೆರೋಲ್‌ ನೀಡಿ’ ಎಂದು ಭಾವನಾತ್ಮಕವಾಗಿ ವಾದ ಮಂಡಿಸಿದಳು.

ನಳಿನಿಗೆ ನೀಡುವ ಭದ್ರತಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಕೋರ್ಟ್‌ ನಿರ್ದೇಶಿಸಿದೆ. 28 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿರುವ ನಳಿನಿ ಕಳೆದ ವರ್ಷ ಆಕೆ ತಂದೆ ಅಂತ್ಯಸಂಸ್ಕಾರಕ್ಕೆಂದು ಒಂದು ದಿನದ ಮಟ್ಟಿಗೆ ಪೆರೋಲ್ ಪಡೆದಿದ್ದಳು.

ನಳಿನಿ ಪುತ್ರಿ ಲಂಡನ್ ನಲ್ಲಿ ಮೆಡಿಸಿನ್ ಶಿಕ್ಷಣವನ್ನು ಪಡೆದಿದ್ದಾರೆ. ವೆಲ್ಲೂರಿನಲ್ಲಿ ಇವರ ವಿವಾಹ ಸರಳವಾಗಿ ನೆರವೇರಲಿದೆ ಎಂದು ತಿಳಿದುಬಂದಿದೆ.ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿಗೆ ಗಲ್ಲುಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಆದರೆ ಸೋನಿಯಾ ಗಾಂಧಿ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದರು. ಆ ಬಳಿಕ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿ ಕೋರ್ಟ್ ತೀರ್ಪು ನೀಡಿತ್ತು. ತದನಂತರ ನಳಿನಿ ಜೈಲಿನಲ್ಲಿಯೇ ಮಗಳಿಗೆ ಜನ್ಮ ನೀಡಿದ್ದಳು.

Vishwa News 24

Recent Posts

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

10 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

14 minutes ago

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

26 minutes ago

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…

35 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಡಳಿತದ ಕ್ರಮಕ್ಕೆ ಕಾಪು ಬಿಜೆಪಿ ತೀವ್ರ ಖಂಡನೆ – vishwanews24

ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…

51 minutes ago