ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆ ತೆರಳಿದೆ ಎಂದು ತಿಳಿದು ಕಾರನ್ನು ಲಾಕ್ ಮಾಡಿ ತೆರಳಿದ್ದರು.
ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದು, ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಚಿಂತಿಸದೆ ಇದ್ದರು. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದ್ದು, ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಮಗು ಅಷ್ಟರಲ್ಲೇ ಸಾವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಾವನಪ್ಪಿದ ಬಾಲಕಿ ಗರ್ವಿಯ ಹುಟ್ಟುಹಬ್ಬವನ್ನು ಮೇ 4 ರಂದು ಆಚರಿಸಲಾಗಿತ್ತು, ಮಗುವನ್ನು ಕಳೆದುಕೊಂಡ ಕುಟುಂಬ ಆಕ್ರಂದನ ಮುಗಿಲುಮುಟ್ಟಿತ್ತು. ತಂದೆಯ ತಾಯಿಯ ಸಣ್ಣ ನಿರ್ಲಕ್ಷಕ್ಕೆ ಪುಟ್ಟ ಮಗು ತನ್ನ ಜೀವವನ್ನು ಬಲಿ ಕೊಟ್ಟಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…