ಬೆಂಗಳೂರು: ಮಚ್ಚು ಹಿಡಿದ ರೀಲ್ಸ್ ಪ್ರಕರಣದಲ್ಲಿ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ರಜತ್ ಕಿಶನ್ ಅವರು 2ನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ವಿಚಾರಣೆಗೆ ಹಾಜರಾದ ಆರೋಪಿ ರಜತ್ ಅವರನ್ನ ಬಸವೇಶ್ವರ ನಗರ ಪೊಲೀಸರು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿದ್ದರು.
ರೀಲ್ಸ್ನಲ್ಲಿ ಬಳಸಿದ್ದ ಮಚ್ಚು ಎಲ್ಲಿ ಹೋಯ್ತು ಅನ್ನೋ ಸ್ಪಷ್ಟ ಮಾಹಿತಿ ಇನ್ನೂ ಪೊಲೀಸರಿಗೆ ಲಭ್ಯವಾಗಿಲ್ಲ. ಹೀಗಾಗಿ ಅಸಲಿ ಮಚ್ಚಿನ ಸಂಬಂಧ ಪೊಲೀಸರ ತನಿಖೆ ಮುಂದುವರಿದಿದೆ. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ರಜತ್ ಕಿಶನ್ ಅವರು ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದರು.
ರೀಲ್ಸ್ ಕೇಸ್ನಲ್ಲಿ ಈಗಾಗಲೇ ರಜತ್ ಅವರು ಒಮ್ಮೆ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನಿನ ಷರತ್ತಿನಲ್ಲಿ ನ್ಯಾಯಾಲಯ ಪ್ರತಿ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಆದ್ರೆ ರಜತ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು.
ಈ ರೀಲ್ಸ್ ಪ್ರಕರಣದಲ್ಲಿ ಆರೋಪಿ ವಿನಯ್ ಗೌಡ ಅವರಿಗೆ ಇಂದು ರಿಲೀಫ್ ಸಿಕ್ಕಿದೆ. ರಜತ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಮತ್ತೊಮ್ಮೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…