ಬೆಂಗಳೂರು: ಮಚ್ಚು ಹಿಡಿದ ರೀಲ್ಸ್ ಪ್ರಕರಣದಲ್ಲಿ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ರಜತ್ ಕಿಶನ್ ಅವರು 2ನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ವಿಚಾರಣೆಗೆ ಹಾಜರಾದ ಆರೋಪಿ ರಜತ್ ಅವರನ್ನ ಬಸವೇಶ್ವರ ನಗರ ಪೊಲೀಸರು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿದ್ದರು.
ರೀಲ್ಸ್ನಲ್ಲಿ ಬಳಸಿದ್ದ ಮಚ್ಚು ಎಲ್ಲಿ ಹೋಯ್ತು ಅನ್ನೋ ಸ್ಪಷ್ಟ ಮಾಹಿತಿ ಇನ್ನೂ ಪೊಲೀಸರಿಗೆ ಲಭ್ಯವಾಗಿಲ್ಲ. ಹೀಗಾಗಿ ಅಸಲಿ ಮಚ್ಚಿನ ಸಂಬಂಧ ಪೊಲೀಸರ ತನಿಖೆ ಮುಂದುವರಿದಿದೆ. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ರಜತ್ ಕಿಶನ್ ಅವರು ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದರು.
ರೀಲ್ಸ್ ಕೇಸ್ನಲ್ಲಿ ಈಗಾಗಲೇ ರಜತ್ ಅವರು ಒಮ್ಮೆ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನಿನ ಷರತ್ತಿನಲ್ಲಿ ನ್ಯಾಯಾಲಯ ಪ್ರತಿ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಆದ್ರೆ ರಜತ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು.
ಈ ರೀಲ್ಸ್ ಪ್ರಕರಣದಲ್ಲಿ ಆರೋಪಿ ವಿನಯ್ ಗೌಡ ಅವರಿಗೆ ಇಂದು ರಿಲೀಫ್ ಸಿಕ್ಕಿದೆ. ರಜತ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಮತ್ತೊಮ್ಮೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…