ಕಾಪು : ಸೇವೆ ಮತ್ತು ಸಮರ್ಪಣೆ ಅಭಿಯಾನದಡಿಯಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಪುಮಂಡಲ ಯುವಮೋರ್ಚ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ ಮತ್ತು ತಂಡದಿಂದ ನಡೆದ ಕಾಪು – ಶಿರ್ವ ಮುಖ್ಯ ರಸ್ತೆ ಬದಿಯಲ್ಲಿದ್ದ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯಕ್ರಮ ಕ್ಕೆ ಮೆಚ್ವುಗೆ ವ್ಯಕ್ತವಾಗಿದೆ.
ಹಲವು ವರ್ಷಗಳ ಹಿಂದೆ ಚಂದ್ರನಗರ – ಪಾದೂರು ಬಳಿ ದಾನಿಗಳ ಸಹಾಯದಿಂದ ಕಟ್ಟಿಸಿದ ಈ ಬಸ್ ನಿಲ್ದಾಣ ವಿಪರೀತ ಕಳೆ, ಪಾಚಿಗಳಿಂದ ಕೂಡಿದ್ದು, ಪ್ರಯಾಣಿಕರು ಬಸ್ ನಿಕ್ದಾಣದಲ್ಲಿ ಕುಳಿತುಕೊಳ್ಳಲೂ ಅಸಹ್ಯ ಪಡುವಂತಾಗಿತ್ತು.
ಇದನ್ನೂ ಓದಿ : ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ವಿಧಿವಶ -Vishwanews24
ಪ್ರಧಾನ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಎಲ್ಲೆಡೆ ಸ್ವಚ್ಚತಾ ಕಾರ್ಯಕ್ರಮ ನಡೆಯುವುದನ್ನು ಗಮನಿಸಿದ ಯುವಮೋರ್ಚ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಈ ಬಸ್ ನಿಲ್ದಾಣದ ಕಟ್ಟಡ ಸ್ವಚ್ಚಗೊಳಿಸುವ ನಿರ್ಧಾರಕ್ಕೆ ಬಂದು ಈ ಬಗ್ಗೆ ತಮ್ಮ ಸ್ನೇಹಿತರೊಡನೆ ಚರ್ಚಿಸಿದ್ದರು.
ಇದನ್ನೂ ಓದಿ : ಮೀನುಗಾರಿಕಾ ಬೋಟುಗಳಲ್ಲಿ ಸೋಲಾರ್ ಅಳವಡಿಕೆ ಕುರಿತು ಪರಿಶೀಲಿಸಿ ಕ್ರಮ: ಎಸ್. ಅಂಗಾರ -Vishwanews24
ಬೆಳಿಗ್ಗೆ ಸ್ವಚ್ಚತಾ ಕೆಲಸವನ್ನು ಆರಂಭಿಸಿ, ಮಧ್ಯಾಹ್ನದ ಒಳಗೆ ಸಾಧ್ಯವಾದಷ್ಟು ಸ್ವಚ್ಚಗೊಳಿಸಿ ಕಟ್ಟಡದ ಮೇಲಿದ್ದ ರಾಶಿ ರಾಶಿ ಪಾಚಿಯನ್ನು ಸುತ್ತ ಹರಡಿದ್ದ ಕಳೆಗಿಡಗಳನ್ನು ಕಡಿದು ಜನಮೆಚ್ಚುಗೆ ಗಳಿಸಿದ್ದಾರೆ. ಇವರ ಕೆಲಸವನ್ನು ನೋಡಿ ರಸ್ತೆಯಲ್ಲು ವಾಹನದಲ್ಲಿ ಸಾಗುವ ಹಲವರು ಬಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ದೇಶದ್ಯಾಂತ ಬಿಜೆಪಿ ಕಾರ್ಯಕರ್ತರು ಹಳ್ಳಿ ಹಳ್ಳಿಗಳಲ್ಲಿ ಈ ರೀತಿಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ನಮ್ಮಂತಹ ಕಾರ್ಯಕರ್ತರಿಗೆ ಇದು ಹೆಮ್ಮೆಯ ವಿಚಾರವಾಗಿದೆ. ಮತ್ತಷ್ಟು ಕೆಲಸ ಮಾಡಲು ಇಂತಹ ಕೆಲಸಗಳೇ ಸ್ಫೂರ್ತಿಯಾಗಿದೆ ಎಂದು ಯುವಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ತಿಳಿಸಿದ್ದಾರೆ.
ಯುವಕರ ಶ್ರಮಾಧಾನ ಕೆಲಸವನ್ನು ತಿಳಿದ ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಸ್ಥಳಕ್ಕೆ ತೆರಳಿ, ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇಂತಹ ಮತ್ತಷ್ಟು ಸೇವೆ ಮತ್ತು ಸಮರ್ಪಣೆ ಸಮಾಜ ಕ್ಕಾಗಿ ಮಾಡಬೇಕೆಂದು ವಿನಂತಿಸಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ : ಸಿಎಂ -Vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…