Featured

ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಕಾಪು – ಶಿರ್ವ ಮುಖ್ಯ ರಸ್ತೆ ಬದಿಯಲ್ಲಿದ್ದ ಬಸ್ ನಿಲ್ದಾಣದ ಸ್ವಚ್ಚತಾ ಕಾರ್ಯಕ್ರಮ‌ – Vishwanews24

ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಕಾಪು – ಶಿರ್ವ ಮುಖ್ಯ ರಸ್ತೆ ಬದಿಯಲ್ಲಿದ್ದ ಬಸ್ ನಿಲ್ದಾಣದ ಸ್ವಚ್ಚತಾ ಕಾರ್ಯಕ್ರಮ‌ – Vishwanews24

ಕಾಪು : ಸೇವೆ ಮತ್ತು ಸಮರ್ಪಣೆ ಅಭಿಯಾನದಡಿಯಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಪು‌ಮಂಡಲ ಯುವಮೋರ್ಚ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ ಮತ್ತು ತಂಡದಿಂದ ನಡೆದ ಕಾಪು – ಶಿರ್ವ ಮುಖ್ಯ ರಸ್ತೆ ಬದಿಯಲ್ಲಿದ್ದ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯಕ್ರಮ‌ ಕ್ಕೆ‌ ಮೆಚ್ವುಗೆ ವ್ಯಕ್ತವಾಗಿದೆ.

ಹಲವು ವರ್ಷಗಳ ಹಿಂದೆ ಚಂದ್ರನಗರ – ಪಾದೂರು ಬಳಿ ದಾನಿಗಳ‌ ಸಹಾಯದಿಂದ ಕಟ್ಟಿಸಿದ ಈ‌ ಬಸ್ ನಿಲ್ದಾಣ ವಿಪರೀತ ಕಳೆ, ಪಾಚಿಗಳಿಂದ ಕೂಡಿದ್ದು, ಪ್ರಯಾಣಿಕರು ಬಸ್ ನಿಕ್ದಾಣದಲ್ಲಿ‌ ಕುಳಿತುಕೊಳ್ಳಲೂ ಅಸಹ್ಯ ಪಡುವಂತಾಗಿತ್ತು.

ಇದನ್ನೂ ಓದಿ : ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ವಿಧಿವಶ -Vishwanews24

ಪ್ರಧಾನ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಎಲ್ಲೆಡೆ ಸ್ವಚ್ಚತಾ ಕಾರ್ಯಕ್ರಮ ನಡೆಯುವುದನ್ನು ಗಮನಿಸಿದ ಯುವಮೋರ್ಚ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಈ ಬಸ್ ನಿಲ್ದಾಣದ ಕಟ್ಟಡ ಸ್ವಚ್ಚಗೊಳಿಸುವ ನಿರ್ಧಾರಕ್ಕೆ ಬಂದು ಈ ಬಗ್ಗೆ ತಮ್ಮ ಸ್ನೇಹಿತರೊಡನೆ ಚರ್ಚಿಸಿದ್ದರು.

ಇದನ್ನೂ ಓದಿ : ಮೀನುಗಾರಿಕಾ ಬೋಟುಗಳಲ್ಲಿ ಸೋಲಾರ್‌ ಅಳವಡಿಕೆ ಕುರಿತು ಪರಿಶೀಲಿಸಿ ಕ್ರಮ: ಎಸ್‌. ಅಂಗಾರ -Vishwanews24

 

ಬೆಳಿಗ್ಗೆ ಸ್ವಚ್ಚತಾ ಕೆಲಸವನ್ನು ಆರಂಭಿಸಿ, ಮಧ್ಯಾಹ್ನದ ಒಳಗೆ ಸಾಧ್ಯವಾದಷ್ಟು ಸ್ವಚ್ಚಗೊಳಿಸಿ ಕಟ್ಟಡದ ಮೇಲಿದ್ದ ರಾಶಿ ರಾಶಿ ಪಾಚಿಯನ್ನು ಸುತ್ತ ಹರಡಿದ್ದ ಕಳೆಗಿಡಗಳನ್ನು ಕಡಿದು ಜನಮೆಚ್ಚುಗೆ ಗಳಿಸಿದ್ದಾರೆ. ಇವರ ಕೆಲಸವನ್ನು ನೋಡಿ ರಸ್ತೆಯಲ್ಲು ವಾಹನದಲ್ಲಿ ಸಾಗುವ ಹಲವರು ಬಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ದೇಶದ್ಯಾಂತ ಬಿಜೆಪಿ ಕಾರ್ಯಕರ್ತರು ಹಳ್ಳಿ ಹಳ್ಳಿಗಳಲ್ಲಿ ಈ ರೀತಿಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ನಮ್ಮಂತಹ ಕಾರ್ಯಕರ್ತರಿಗೆ ಇದು ಹೆಮ್ಮೆಯ ವಿಚಾರವಾಗಿದೆ. ಮತ್ತಷ್ಟು ಕೆಲಸ ಮಾಡಲು ಇಂತಹ ಕೆಲಸಗಳೇ ಸ್ಫೂರ್ತಿಯಾಗಿದೆ ಎಂದು ಯುವಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ತಿಳಿಸಿದ್ದಾರೆ.

ಯುವಕರ ಶ್ರಮಾಧಾನ ಕೆಲಸವನ್ನು ತಿಳಿದ ಬಿಜೆಪಿ‌ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಸ್ಥಳಕ್ಕೆ ತೆರಳಿ, ಅವರಿಗೆ ಅಭಿನಂದನೆ‌ ಸಲ್ಲಿಸಿದ್ದಾರೆ. ಇಂತಹ ಮತ್ತಷ್ಟು ಸೇವೆ ಮತ್ತು ಸಮರ್ಪಣೆ ಸಮಾಜ ಕ್ಕಾಗಿ ಮಾಡಬೇಕೆಂದು ವಿನಂತಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ : ಸಿಎಂ -Vishwanews24

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

8 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

8 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

8 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

11 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

11 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

11 hours ago