ಕಾಪು: ಮಜೂರು ಹಾಲು ಉತ್ಪಾದಕರ ಸಹಕಾರಿ ಸಂಘದ 185 ಹೈನುಗಾರ ಸದಸ್ಯರಿಗೆ ಪಡಿತರ ಕಿಟ್ ವಿತರಣಾ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಹಾಲು ಮಹಾ ಮಂಡಳ ನಿರ್ದೇಶಕ ಕಾಪು ದಿವಾಕರ್ ಶೆಟ್ಟಿ ಮಾತನಾಡಿ ” ಕೊರೋನಾ ಎಂಬ ಮಹಾಮಾರಿಯು ಇಡೀ ಜಗತ್ತನ್ನು ತಲ್ಲಣಗೊಳಿಸಿ,ಭಾರತ ದೇಶ ಲಾಕ್-ಡೌನ್ ಮಾಡುವ ಪರಿಸ್ಥಿತಿ ಎದುರಾಯಿತು,ಇಂತಹ ಸಂಧರ್ಭದಲ್ಲಿ ದಿನಗೂಲಿ ಕಾರ್ಮಿಕರು, ಬಡ ಮಧ್ಯಮ ಜನರ ಜೀವನ ಅಸ್ತವ್ಯಸ್ತವಾಯಿತು.ಇಂತಹ ಸಂಧರ್ಭದಲ್ಲಿ ಎಲ್ಲಾ ಸಾರ್ವಜನಿಕರಲ್ಲಿ ವಿನಂತಿ ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ನಿರ್ಮೂಲನೆಗೆ ಸಹಕರಿಸಬೇಕು,ಪ್ರತಿಯೊಬ್ಬ ಹೈನುಗಾರರು ಮನೆಮನೆಯಲ್ಲಿ ತರಕಾರಿ ಕೃಷಿ ಬೆಳೆಸುವ ಮೂಲಕ ನಿಮ್ಮ ಸ್ವಂತತೆ ಕಾಪಡಿಕೊಳ್ಳಬೇಕು,ಲಾಕ್-ಡೌನ್ ಸಮಯದಲ್ಲಿ ಈ ಕಿಟ್ ವಿತರಣೆ ಅಗತ್ಯವಾಗಿದೆ ಎಂದರು.
ಸಮಾಜ ಸೇವಕ ಮಜೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕರಂದಾಡಿ ಲೀಲಾಧರ ಶೆಟ್ಟಿ,ಕಾಪು ಎಎಸ್ಐ ರಾಜೇಂದ್ರ ಮಣಿಯಾಣಿ, ವಿಸ್ತರಣಾಧಿಕಾರಿ ಯಶವಂತ್,ಕಾರ್ಯನಿರ್ವಾಹಣಾಧಿಕಾರಿ ಗುರುರಾಜ್, ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್, ವಿಶ್ವನ್ಯೂಸ್24 (9343846360)
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…