ಕಾಪು: ಮಜೂರು ಹಾಲು ಉತ್ಪಾದಕರ ಸಹಕಾರಿ ಸಂಘದ 185 ಹೈನುಗಾರ ಸದಸ್ಯರಿಗೆ ಪಡಿತರ ಕಿಟ್ ವಿತರಣಾ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಹಾಲು ಮಹಾ ಮಂಡಳ ನಿರ್ದೇಶಕ ಕಾಪು ದಿವಾಕರ್ ಶೆಟ್ಟಿ ಮಾತನಾಡಿ ” ಕೊರೋನಾ ಎಂಬ ಮಹಾಮಾರಿಯು ಇಡೀ ಜಗತ್ತನ್ನು ತಲ್ಲಣಗೊಳಿಸಿ,ಭಾರತ ದೇಶ ಲಾಕ್-ಡೌನ್ ಮಾಡುವ ಪರಿಸ್ಥಿತಿ ಎದುರಾಯಿತು,ಇಂತಹ ಸಂಧರ್ಭದಲ್ಲಿ ದಿನಗೂಲಿ ಕಾರ್ಮಿಕರು, ಬಡ ಮಧ್ಯಮ ಜನರ ಜೀವನ ಅಸ್ತವ್ಯಸ್ತವಾಯಿತು.ಇಂತಹ ಸಂಧರ್ಭದಲ್ಲಿ ಎಲ್ಲಾ ಸಾರ್ವಜನಿಕರಲ್ಲಿ ವಿನಂತಿ ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ನಿರ್ಮೂಲನೆಗೆ ಸಹಕರಿಸಬೇಕು,ಪ್ರತಿಯೊಬ್ಬ ಹೈನುಗಾರರು ಮನೆಮನೆಯಲ್ಲಿ ತರಕಾರಿ ಕೃಷಿ ಬೆಳೆಸುವ ಮೂಲಕ ನಿಮ್ಮ ಸ್ವಂತತೆ ಕಾಪಡಿಕೊಳ್ಳಬೇಕು,ಲಾಕ್-ಡೌನ್ ಸಮಯದಲ್ಲಿ ಈ ಕಿಟ್ ವಿತರಣೆ ಅಗತ್ಯವಾಗಿದೆ ಎಂದರು.
ಸಮಾಜ ಸೇವಕ ಮಜೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕರಂದಾಡಿ ಲೀಲಾಧರ ಶೆಟ್ಟಿ,ಕಾಪು ಎಎಸ್ಐ ರಾಜೇಂದ್ರ ಮಣಿಯಾಣಿ, ವಿಸ್ತರಣಾಧಿಕಾರಿ ಯಶವಂತ್,ಕಾರ್ಯನಿರ್ವಾಹಣಾಧಿಕಾರಿ ಗುರುರಾಜ್, ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್, ವಿಶ್ವನ್ಯೂಸ್24 (9343846360)
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…