Featured

ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು : ಪೇಜಾವರ ಶ್ರೀ – Vishwanews24

ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು : ಪೇಜಾವರ ಶ್ರೀ

ವಿಜಯಪುರ: ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು  ಭೇದ-ಭಾವ ಮಾಡೋದನ್ನು ನಿಲ್ಲಿಸಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.

ನಗರಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಲಕಾಲಕ್ಕೆ ಸಮಾಜವನ್ನು ಸ್ವಚ್ಛಗೊಳಿಸಬೇಕು. ಮಠ, ರಾಜಕೀಯ ಪಕ್ಷಗಳು ಬೇಧ – ಭಾವ ಮಾಡಬಾರದು. ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ರೇ ಎಲ್ಲವೂ ಸರಿಯಾಗಿ ಇರುತ್ತೆ. ದೈವ ಭಕ್ತಿ, ದೇಶ ಭಕ್ತಿ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ  ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಹಮ್ಮಿಕೊಳ್ಳೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು ಹೇಳಿದ್ದಾರೆ.

ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವುದು ಒಂದು ಕನಸು ಆಗಿತ್ತು. ಆದರೀಗ ಕೇವಲ ರಾಮಮಂದಿರ ನಿರ್ಮಾಣ ಅಷ್ಟೇ ಆಗಬಾರದು. ಬದಲಿಗೆ ರಾಮರಾಜ್ಯ ಕನಸು ನನಸು ಆಗಬೇಕು. ರಾಮಾಯಣ ಕುರಿತು ಅಧ್ಯಯನ ಮಾಡಬೇಕು ಎಂದು ಕರೆ ನೀಡಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago