Featured

ಮಠ ಮಂದಿರ ಕಟ್ಟಿ ಹಿಂದುತ್ವ ಉಳಿಸಿದ್ದು ನಾವು ; ಬಿಜೆಪಿಗರದ್ದು ಕೇವಲ ಬಾಯಿ ಮಾತಿನ ಹಿಂದುತ್ವ: ಸಚಿವ ಮಂಕಾಳ ವೈದ್ಯ  – Vishwanews24

ಮಠ ಮಂದಿರ ಕಟ್ಟಿ ಹಿಂದುತ್ವ ಉಳಿಸಿದ್ದು ನಾವು,  ಬಿಜೆಪಿಗರದ್ದು ಕೇವಲ ಬಾಯಿಮಾತಿನ ಹಿಂದುತ್ವ: ಸಚಿವ ಮಂಕಾಳ ವೈದ್ಯ

ಕಾರವಾರ : ಮಠ ಮಂದಿರ ಕಟ್ಟಿ , ಹಿಂದುತ್ವ ಉಳಿಸಿದ್ದು ನಾವು. ಬಿಜೆಪಿಗರದ್ದು ಕೇವಲ ಬಾಯಿಮಾತಿನ ಹಿಂದುತ್ವ. ಅವರು ಬೇಕಿದ್ದರೆ ಹಿಂದುತ್ವದ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ. ರಾಜಕಾರಣದಲ್ಲಿ ಧರ್ಮವಲ್ಲ , ಮತದಾರರಿಗೆ ಸ್ಪಂದನೆ ನೀಡುವವರು ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಮುಂಡಗೊಡ ತಾಲೂಕಿನ ಮಳಗಿಯಲ್ಲಿ‌ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ. ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ನೈತಿಕತೆ ಇಲ್ಲ. ಯಾವ ಸಮಸ್ಯೆಗೂ ಸ್ಪಂದಿಸದ ಸಂಸದರಿಗೆ ೩೦ ವರ್ಷ ಅವಕಾಶ ಕೊಟ್ಟಿದ್ದೆವು. ಈ ಬಾರಿ ಯಾವುದೇ ಕಾರಣಕ್ಕೂ ಎಲ್ಲಿಯೂ ವ್ಯತ್ಯಾಸವಾಗಬಾರದು. ಒಂದು ಅವಕಾಶ ಡಾ.ಅಂಜಲಿಯವರಿಗೆ ನೀಡಿ, ಮುಂದೆ ನೀವೇ ಬರಬೇಕೆಂದು ನೀವೇ ಕೇಳುತ್ತೀರಿ ಎಂದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತನಾಡಿ, ೭೦ ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಗರು ಕೇಳುತ್ತಾರೆ. ೧೦ ವರ್ಷ ಇವರು ಏನು ಮಾಡಿದರೆಂದು ಮೊದಲು ಹೇಳಲಿ. ರೈತರು ವರ್ಷಗಟ್ಟಲೆ ಪ್ರತಿಭಟನೆ ಮಾಡಿದರೂ ಎಸಿ ರೂಮಿಂದ ಪ್ರಧಾನಿ ಹೊರಕ್ಕೆ ಬಂದಿಲ್ಲ. ಅವರೆಲ್ಲ ಖಲಿಸ್ತಾನಿ ಭಯೋತ್ಪಾದಕರು ಎಂದು ಕೇಂದ್ರ ಸರ್ಕಾರವೇ ಘೋಷಿಸಿಬಿಟ್ಟಿತು. ಇಂಥ ನಾಯಕರಿಗೆ ಮತ ಹಾಕಬೇಕಾ? ಬಡವರ, ರೈತಪರ ಕೆಲಸ ಮಾಡಿದ್ದು ಕಾಂಗ್ರೆಸ್. ಹತ್ತು ವರ್ಷದಿಂದ ಅವರು ಮನ್ ಕಿ ಬಾತ್ ಹೇಳುತ್ತಾ ಜನ್ ಕಿ ಬಾತ್ ಕೇಳಿಲ್ಲ. ಭಾರತ್ ಜೋಡೋ ಯಾತ್ರೆ ಮೂಲಕ ಜನ್ ಕೀ ಬಾತ್ ಕೇಳಿದ್ದೇವೆ, ಅದರಂತೆ ಪ್ರಣಾಳಿಕೆ ಮಾಡಿದ್ದೇವೆ. ಸಂಸತ್‌ನಲ್ಲಿ ಅರಣ್ಯ ಅತಿಕ್ರಮಣದಾರರ ಹೋರಾಟದ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕ ಭೀಮಣ್ಣ ನಾಯ್ಕ,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವ್ಕರ್, ಪ್ರದಾನ ಕಾರ್ಯದರ್ಶಿ ಎಂ.ಎನ್ ದುಂಡಸಿ, ಮಾಜಿ ಶಾಸಕ ವಿ.ಎಸ್.ಪಾಟೀಲ್, ಕಾರವಾರ- ಅಂಕೋಲಾ ಕ್ಷೇತ್ರದ ಕೆಪಿಸಿಸಿ ಸಂಯೋಜಕ ಸುನೀಲ್ ನಾಯ್ಕ ಮಳಲ್ಗಾಂವ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವ್ಕರ್, ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ, ಗ್ಯಾರಂಟಿ ಪ್ರಾಧಿಕಾರದ ತಾಲೂಕಾಧ್ಯಕ್ಷ ರಾಜಶೇಖರ ಹಿರೇಮಠ್, ಚುನಾವಣಾ ಉಸ್ತುವಾರಿ ಸಿ.ವಿ.ಗೌಡ, ಪ್ರಮುಖರಾದ ವಿವೇಕ್ ಹೆಬ್ಬಾರ್, ನಾಗರಾಜ್ ನಾರ್ವೇಕರ್, ಶ್ರೀನಿವಾಸ ಧಾತ್ರಿ, ಕೃಷ್ಣಾ ಹಿರೇಹಳ್ಳಿ, ಕೆಪಿಸಿಸಿ ಕಾರ್ಯದರ್ಶಿ ಕಾರ್ನಲಿನ್ ಫರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago