Featured

ಮಠ ಮಂದಿರ ಕಟ್ಟಿ ಹಿಂದುತ್ವ ಉಳಿಸಿದ್ದು ನಾವು ; ಬಿಜೆಪಿಗರದ್ದು ಕೇವಲ ಬಾಯಿ ಮಾತಿನ ಹಿಂದುತ್ವ: ಸಚಿವ ಮಂಕಾಳ ವೈದ್ಯ  – Vishwanews24

ಮಠ ಮಂದಿರ ಕಟ್ಟಿ ಹಿಂದುತ್ವ ಉಳಿಸಿದ್ದು ನಾವು,  ಬಿಜೆಪಿಗರದ್ದು ಕೇವಲ ಬಾಯಿಮಾತಿನ ಹಿಂದುತ್ವ: ಸಚಿವ ಮಂಕಾಳ ವೈದ್ಯ

ಕಾರವಾರ : ಮಠ ಮಂದಿರ ಕಟ್ಟಿ , ಹಿಂದುತ್ವ ಉಳಿಸಿದ್ದು ನಾವು. ಬಿಜೆಪಿಗರದ್ದು ಕೇವಲ ಬಾಯಿಮಾತಿನ ಹಿಂದುತ್ವ. ಅವರು ಬೇಕಿದ್ದರೆ ಹಿಂದುತ್ವದ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ. ರಾಜಕಾರಣದಲ್ಲಿ ಧರ್ಮವಲ್ಲ , ಮತದಾರರಿಗೆ ಸ್ಪಂದನೆ ನೀಡುವವರು ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಮುಂಡಗೊಡ ತಾಲೂಕಿನ ಮಳಗಿಯಲ್ಲಿ‌ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ. ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ನೈತಿಕತೆ ಇಲ್ಲ. ಯಾವ ಸಮಸ್ಯೆಗೂ ಸ್ಪಂದಿಸದ ಸಂಸದರಿಗೆ ೩೦ ವರ್ಷ ಅವಕಾಶ ಕೊಟ್ಟಿದ್ದೆವು. ಈ ಬಾರಿ ಯಾವುದೇ ಕಾರಣಕ್ಕೂ ಎಲ್ಲಿಯೂ ವ್ಯತ್ಯಾಸವಾಗಬಾರದು. ಒಂದು ಅವಕಾಶ ಡಾ.ಅಂಜಲಿಯವರಿಗೆ ನೀಡಿ, ಮುಂದೆ ನೀವೇ ಬರಬೇಕೆಂದು ನೀವೇ ಕೇಳುತ್ತೀರಿ ಎಂದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತನಾಡಿ, ೭೦ ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಗರು ಕೇಳುತ್ತಾರೆ. ೧೦ ವರ್ಷ ಇವರು ಏನು ಮಾಡಿದರೆಂದು ಮೊದಲು ಹೇಳಲಿ. ರೈತರು ವರ್ಷಗಟ್ಟಲೆ ಪ್ರತಿಭಟನೆ ಮಾಡಿದರೂ ಎಸಿ ರೂಮಿಂದ ಪ್ರಧಾನಿ ಹೊರಕ್ಕೆ ಬಂದಿಲ್ಲ. ಅವರೆಲ್ಲ ಖಲಿಸ್ತಾನಿ ಭಯೋತ್ಪಾದಕರು ಎಂದು ಕೇಂದ್ರ ಸರ್ಕಾರವೇ ಘೋಷಿಸಿಬಿಟ್ಟಿತು. ಇಂಥ ನಾಯಕರಿಗೆ ಮತ ಹಾಕಬೇಕಾ? ಬಡವರ, ರೈತಪರ ಕೆಲಸ ಮಾಡಿದ್ದು ಕಾಂಗ್ರೆಸ್. ಹತ್ತು ವರ್ಷದಿಂದ ಅವರು ಮನ್ ಕಿ ಬಾತ್ ಹೇಳುತ್ತಾ ಜನ್ ಕಿ ಬಾತ್ ಕೇಳಿಲ್ಲ. ಭಾರತ್ ಜೋಡೋ ಯಾತ್ರೆ ಮೂಲಕ ಜನ್ ಕೀ ಬಾತ್ ಕೇಳಿದ್ದೇವೆ, ಅದರಂತೆ ಪ್ರಣಾಳಿಕೆ ಮಾಡಿದ್ದೇವೆ. ಸಂಸತ್‌ನಲ್ಲಿ ಅರಣ್ಯ ಅತಿಕ್ರಮಣದಾರರ ಹೋರಾಟದ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕ ಭೀಮಣ್ಣ ನಾಯ್ಕ,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವ್ಕರ್, ಪ್ರದಾನ ಕಾರ್ಯದರ್ಶಿ ಎಂ.ಎನ್ ದುಂಡಸಿ, ಮಾಜಿ ಶಾಸಕ ವಿ.ಎಸ್.ಪಾಟೀಲ್, ಕಾರವಾರ- ಅಂಕೋಲಾ ಕ್ಷೇತ್ರದ ಕೆಪಿಸಿಸಿ ಸಂಯೋಜಕ ಸುನೀಲ್ ನಾಯ್ಕ ಮಳಲ್ಗಾಂವ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವ್ಕರ್, ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ, ಗ್ಯಾರಂಟಿ ಪ್ರಾಧಿಕಾರದ ತಾಲೂಕಾಧ್ಯಕ್ಷ ರಾಜಶೇಖರ ಹಿರೇಮಠ್, ಚುನಾವಣಾ ಉಸ್ತುವಾರಿ ಸಿ.ವಿ.ಗೌಡ, ಪ್ರಮುಖರಾದ ವಿವೇಕ್ ಹೆಬ್ಬಾರ್, ನಾಗರಾಜ್ ನಾರ್ವೇಕರ್, ಶ್ರೀನಿವಾಸ ಧಾತ್ರಿ, ಕೃಷ್ಣಾ ಹಿರೇಹಳ್ಳಿ, ಕೆಪಿಸಿಸಿ ಕಾರ್ಯದರ್ಶಿ ಕಾರ್ನಲಿನ್ ಫರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago