ಮಡಿಕೇರಿ: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಸೃಷ್ಟಿಯಾಗಿರುವ ಹಿಜಾಬ್ ವಿವಾದ ಮಡಿಕೇರಿಗೂ ವ್ಯಾಪಿಸಿದೆ. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳು ಇಂದು ಕೇಸರಿ ಶಲ್ಯದೊಂದಿಗೆ ಆಗಮಿಸುವ ಮೂಲಕ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ಕ್ರಮವನ್ನು ವಿರೋಧಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದು ಖಡ್ಡಾಯವಾಗಿದ್ದು, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರೆ ನಾವು ಕೂಡ ಕೇಸರಿ ಶಲ್ಯ ಹಾಕಿಕೊಂಡೇ ಬರುತ್ತೇವೆ ಎಂದರು.
ಸುಮಾರು 30 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ. ಇಂದು ನಾವು 50 ಕ್ಕೂ ಹೆಚ್ಚು ಮಂದಿ ಕೇಸರಿ ಶಲ್ಯ ಹಾಕಿಕೊಂಡು ಬಂದಿದ್ದೇವೆ. ನಾಳೆಯಿಂದ ಎಲ್ಲರೂ ಹಾಕುತ್ತೇವೆ ಎಂದು ತಿಳಿಸಿದರು.
ಪ್ರಾಂಶುಪಾಲರಾದ ಡಾ.ಜಗತ್ ತಿಮ್ಮಯ್ಯ ಮಾತನಾಡಿ ವಿದ್ಯಾರ್ಥಿಗಳ ಮನವೊಲಿಸುವ ಕಾರ್ಯ ಮಾಡಿದ್ದೇವೆ, ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿದೆ. ಆದರೆ ನಮ್ಮ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಇನ್ನೂ ಸಮವಸ್ತ್ರ ಹಂಚಿಕೆಯಾಗಿಲ್ಲ. ಸಮವಸ್ತ್ರ ಬಂದ ನಂತರ ಸರ್ಕಾರದ ನಿಯಮವನ್ನು ಪಾಲಿಸಲಾಗುವುದು. ನಿಯಮ ಮೀರಿ ವಿದ್ಯಾರ್ಥಿಗಳು ನಡೆದುಕೊಂಡರೆ ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…