Featured

ಮಡಿಕೇರಿಯಲ್ಲಿ ರಂಪಾಟ ನಡೆಸಿ ಸಾರ್ಜಜನಿಕರ ಆಕ್ರೋಶಕ್ಕೆ ಗುರಿಯಾದ ಹುಚ್ಚ ವೆಂಕಟ್​ -Vishwanews24

ಮಡಿಕೇರಿ:  ಮಡಿಕೇರಿಯಲ್ಲಿ ಹುಚ್ಚಾಟವಾಡಿ ಸಾರ್ಜಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ ಕೆಎಸ್ ಆರ್ ಟಿಸಿ ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

ಹುಚ್ಚ ವೆಂಕಟ್ ಮಡಿಕೇರಿ ನಗರದ ಡಿಪೋ ಬಳಿ ಕಾಣಿಸಿಕೊಂಡು, ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದರು. ಈ ವೇಳೆ ನಾಪೋಕ್ಲುವಿನ ದಿಲೀಪ್ ಎಂಬವರು ತಮ್ಮ ಕಾರನ್ನು ಡಿಪೋ ಬಳಿ ನಿಲ್ಲಿಸಿ ಸಮೀಪದ ಎಟಿಎಂಗೆ ಹೋಗಿದ್ದರು. ಎಟಿಎಂನಿಂದ ಹಿಂತಿರುಗುತ್ತಿದ್ದ ದಿಲೀಪ್ ಸಾಮಾನ್ಯವಾಗಿಯೇ ಹುಚ್ಚ ವೆಂಕಟ್ ಅವರನ್ನು ನೋಡಿದ್ದಾರೆ. ಇಷ್ಟಕ್ಕೆ ಕೆರಳಿದ ಹುಚ್ಚ ವೆಂಕಟ್ ‘ನನ್ನ ಯಾಕೆ ಗುರಾಯಿಸುತ್ತಿದ್ದೀಯಾ’ ಎಂದು ತಕರಾರು ಎತ್ತಿದ್ದಾರೆ.

ಹುಚ್ಚ ವೆಂಕಟ್ ಹುಚ್ಚಾಟವನ್ನು ಗಮನಿಸುತ್ತಿದ್ದ ಸ್ಥಳೀಯರು ಕೋಪಗೊಂಡು, ಬುದ್ಧಿ ಹೇಳಲು ಮುಂದಾದರು. ಆದರೆ ಹುಚ್ಚ ವೆಂಕಟ್ ಸುಮ್ಮನಾಗದಿದ್ದಾಗ ಸುತ್ತುವರಿದ ಸಾರ್ವಜನಿಕರು ದಿಲೀಪ್ ಕೈಯಿಂದ ಹಲ್ಲೆ ನಡೆಸಿದ್ದಲ್ಲದೆ, ತಾವೂ ಕೂಡ ಥಳಿಸಿದ್ದಾರೆ.

ಈ ಬಗ್ಗೆ ಸಾರ್ವಜನಿಕರು ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ಪೊಲೀಸರು ಹುಚ್ಚ ವೆಂಕಟ್ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

46 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

56 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago