ಉಡುಪಿ : ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿ ಮತ್ತು rotary ಕಲ್ಯಾಣಪುರ ಇವರ ವತಿಯಿಂದ ನೆರೆಪೀಡಿತ ಮಡಿಕೇರಿಯ ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳ ಸಂಗ್ರಹಣೆಯನ್ನು ಉದಾರ ದಾನಿಗಳಿಂದ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಯವರಾದ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಚಾಲನೆಯನ್ನು ನೀಡಿದರು.
ಬೆಳಗಿನಿಂದ ಸಂಜೆಯವರೆಗೆ ಸುಮಾರು ಒಂದು ಲಕ್ಷದ ಎಂಬತ್ತು ಸಾವಿರ ಗಿಂತಲೂ ಹೆಚ್ಚಿನ ಸಾಮಗ್ರಿಗಳನ್ನು ಸಂಗ್ರಹಿಸಲಾಯಿತು ಸಂಜೆ 5 ಗಂಟೆಗೆ ಉಡುಪಿಯಿಂದ ಸುಮಾರು 10 ಜನರನ್ನು ಒಳಗೊಂಡ ತಂಡ ಸಂಗ್ರಹಿಸಿದ ಸಾಮಗ್ರಿಗಳೊಂದಿಗೆ ಮಡಿಕೇರಿಗೆ ರವಾನಿಸಲಾಯಿತು.
ಜಿಲ್ಲಾಧಿಕಾರಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭ ಅಪರ ಜಿಲ್ಲಾಧಿಕಾರಿಯವರು ಹಾಗೂ ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿಯ ಸಂಚಾಲಕರುಗಳಾದ ಎಂ. ಜಿ. ನಾಗೇಂದ್ರ ರಾಘವೇಂದ್ರ ಶೆಟ್ಟಿ , ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಅನ್ಸರ್ ಅಹ್ಮದ್, ಸುಧೀರ್ ಪೂಜಾರಿ, ವಸ್ತುಗಳನ್ನು ದಾನವಾಗಿ ನೀಡಿದ ಉದಯ ಪೂಜಾರಿ ಅಮ್ಮುಂಜೆ, ಪರ್ವೇಜ್ ಅಹಮದ್ ಫಿರೋಜ್ ಅಹ್ಮದ್, ಪ್ರವೀಣ್ ಬಾರ್ಕೂರು ಮತ್ತು ಉದಯ ಕಿರಣ್ ರವರು ಉಪಸ್ಥಿತರಿದ್ದರು.
ಸಂಗ್ರಹಿಸಿದ ವಸ್ತುಗಳಲ್ಲಿ ಬಿಸ್ಕಿಟ್, ಬ್ರೆಡ್ಡು, ಹಾಲು, ಹಾಲಿನ ಹುಡಿ,ಬಟ್ಟೆಗಳು, ಸ್ಯಾನಿಟರಿ ಪ್ಯಾಡ್ ಗಳು ಹಾಗೂ 2200 ಚಪ್ಪಲಿಗಳು, ನೀರಿನ ಬಾಟಲಿಗಳು,ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಒಳಗೊಂಡಿತ್ತು..
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…