ಉಡುಪಿ : ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿ ಮತ್ತು rotary ಕಲ್ಯಾಣಪುರ ಇವರ ವತಿಯಿಂದ ನೆರೆಪೀಡಿತ ಮಡಿಕೇರಿಯ ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳ ಸಂಗ್ರಹಣೆಯನ್ನು ಉದಾರ ದಾನಿಗಳಿಂದ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಯವರಾದ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಚಾಲನೆಯನ್ನು ನೀಡಿದರು.
ಬೆಳಗಿನಿಂದ ಸಂಜೆಯವರೆಗೆ ಸುಮಾರು ಒಂದು ಲಕ್ಷದ ಎಂಬತ್ತು ಸಾವಿರ ಗಿಂತಲೂ ಹೆಚ್ಚಿನ ಸಾಮಗ್ರಿಗಳನ್ನು ಸಂಗ್ರಹಿಸಲಾಯಿತು ಸಂಜೆ 5 ಗಂಟೆಗೆ ಉಡುಪಿಯಿಂದ ಸುಮಾರು 10 ಜನರನ್ನು ಒಳಗೊಂಡ ತಂಡ ಸಂಗ್ರಹಿಸಿದ ಸಾಮಗ್ರಿಗಳೊಂದಿಗೆ ಮಡಿಕೇರಿಗೆ ರವಾನಿಸಲಾಯಿತು.
ಜಿಲ್ಲಾಧಿಕಾರಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭ ಅಪರ ಜಿಲ್ಲಾಧಿಕಾರಿಯವರು ಹಾಗೂ ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿಯ ಸಂಚಾಲಕರುಗಳಾದ ಎಂ. ಜಿ. ನಾಗೇಂದ್ರ ರಾಘವೇಂದ್ರ ಶೆಟ್ಟಿ , ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಅನ್ಸರ್ ಅಹ್ಮದ್, ಸುಧೀರ್ ಪೂಜಾರಿ, ವಸ್ತುಗಳನ್ನು ದಾನವಾಗಿ ನೀಡಿದ ಉದಯ ಪೂಜಾರಿ ಅಮ್ಮುಂಜೆ, ಪರ್ವೇಜ್ ಅಹಮದ್ ಫಿರೋಜ್ ಅಹ್ಮದ್, ಪ್ರವೀಣ್ ಬಾರ್ಕೂರು ಮತ್ತು ಉದಯ ಕಿರಣ್ ರವರು ಉಪಸ್ಥಿತರಿದ್ದರು.
ಸಂಗ್ರಹಿಸಿದ ವಸ್ತುಗಳಲ್ಲಿ ಬಿಸ್ಕಿಟ್, ಬ್ರೆಡ್ಡು, ಹಾಲು, ಹಾಲಿನ ಹುಡಿ,ಬಟ್ಟೆಗಳು, ಸ್ಯಾನಿಟರಿ ಪ್ಯಾಡ್ ಗಳು ಹಾಗೂ 2200 ಚಪ್ಪಲಿಗಳು, ನೀರಿನ ಬಾಟಲಿಗಳು,ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಒಳಗೊಂಡಿತ್ತು..
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…