Featured

ಮಡಿಕೇರಿ:  ಎಸ್ಟೇಟ್​ಗೆ ನುಗ್ಗಿ, ನನ್ನ ಜಾಗದಲ್ಲಿ ಮೇಯುತ್ತಿದೆ ಎಂದು ಎರಡು ಹಸುಗಳನ್ನು ಗುಂಡಿಟ್ಟು ಕೊಂದ ಎಸ್ಟೇಟ್ ಮಾಲೀಕ – Vishwanews24

ಮಡಿಕೇರಿ:  ಎಸ್ಟೇಟ್​ಗೆ ನುಗ್ಗಿ, ನನ್ನ ಜಾಗದಲ್ಲಿ ಮೇಯುತ್ತಿದೆ ಎಂದು ಎರಡು ಹಸುಗಳನ್ನು ಗುಂಡಿಟ್ಟು ಕೊಂದ ಎಸ್ಟೇಟ್ ಮಾಲೀಕ

ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಮೂರು ಹಸುಗಳು ಹುಲ್ಲು ಮೇಯುತ್ತಾ, ನರೇಂದ್ರ ನಾಯ್ಡು ಎಂಬುವವರ ಎಸ್ಟೇಟ್​ಗೆ ನುಗ್ಗಿದ್ದು, ನನ್ನ ಜಾಗದಲ್ಲಿ ಮೇಯುತ್ತಿದೆ ಎಂಬ ಕಾರಣಕ್ಕಾಗಿ ಎಸ್ಟೇಟ್ ಮಾಲೀಕ ಮೂರು ಹಸುಗಳಲ್ಲಿ ಎರಡು ಹಸುಗಳನ್ನು ಗುಂಡಿಟ್ಟು ಕೊಂದು ಹಾಕಿದ್ದಾನೆ.

ಸಿ.ಕೆ.ಮಣಿ ಎಂಬುವರಿಗೆ ಸೇರಿದ‌ ಹಸುಗಳಾಗಿದ್ದು, ಹಲವು ಹಸುಗಳನ್ನು ಸಾಕಿದ್ದ ಇವರು ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಮೊನ್ನೆ (ಡಿ.5) ಮಣಿಯ ಮೂರು ಹಸುಗಳಲ್ಲಿ ಒಂದು ಮಾತ್ರ ಮನೆಗೆ ಹಿಂದಿರುಗಿತ್ತು. ಆ ಹಸು ಕೂಡ ಗಂಭೀರವಾಗಿ ಗಾಯಗೊಂಡಿರುವುದನ್ನು ಮಣಿ ಗಮನಿಸಿದ್ದಾರೆ. ನಂತರ ಹಸುವಿಗೆ ಗುಂಡು ತಗುಲಿದ್ದು ಗೊತ್ತಾಗಿ ಚಿಕಿತ್ಸೆ ನೀಡಲಾಗಿದೆ. ಇನ್ನು ಉಳಿದ ಎರಡು ಹಸುಗಳು ಪಕ್ಕದ ಎಸ್ಟೇಟ್‌ನಲ್ಲಿ ಸತ್ತು ಬಿದ್ದಿರುವ ಬಗ್ಗೆ ಮಾಹಿತಿ ಬಂದಿದ್ದು. ಮಣಿ ಅವರು ಹುಡುಕಾಡಲು ಹೋದಾಗ ನರೇಂದ್ರ ನಾಯ್ಡು ಒಡೆತನದ ಎಸ್ಟೇಟ್‌ನಲ್ಲಿ ಹಸುಗಳ ದೇಹ ಪತ್ತೆಯಾಗಿದೆ.

ಹಸುಗಳ ದೇಹದ ಮೇಲೆ ಗುಂಡಿನ ಗುರುತುಗಳಿದ್ದು, ತನ್ನ ಹಸುಗಳನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಮಣಿ ಆರೋಪಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಸಿ.ಕೆ.ಮಣಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಟೇಟ್ ಮಾಲೀಕನ ಹುಡುಕಾಟದಲ್ಲಿದ್ದಾರೆ. ಎಸ್ಟೇಟ್ ಮಾಲಿಕ ನರೇಂದ್ರ ನಾಯ್ಡು ತಲೆಮರೆಸಿಕೊಂಡಿದ್ದು, ಪೊಲೀಸರು ಅರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago