Featured

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು

ಮಡಿಕೇರಿ : ಸಾಕಾನೆ ಮೈಮೇಲೆ ಬಿದ್ದ ಪರಿಣಾಮ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗಿನ ಹೆಸರುವಾಸಿ ಪ್ರವಾಸಿ ತಾಣ ದುಬಾರೆಯಲ್ಲಿ ನಡೆದಿದೆ.

ಚೆನ್ನೈ ಮೂಲದ ಪಲ್ಲಾವರಂ ನ ನಿವಾಸಿ ಜಿನ್ಶು (32) ಮೃತ ಮಹಿಳೆ. ಇವರ ಪತಿ ಜೋಯಲ್ ಅವರಿಗೂ ಗಾಯಗಳಾಗಿವೆ. “ಮಕ್ನಾ” ಎಂಬ ಹೆಸರಿನ ಸಾಕಾನೆಯನ್ನು ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯ ನದಿಯಲ್ಲಿ ಸ್ನಾನ ಮಾಡಿಸುತ್ತಿದ್ದ ದೃಶ್ಯವನ್ನು ಪ್ರವಾಸಿಗರು ವೀಕ್ಷಿಸುತ್ತಿದ್ದರು. ಈ ಸಂದರ್ಭ “ಕಂಜನ್” ಎಂಬ ಮತ್ತೊಂದು ಸಾಕಾನೆಗೆ ಮದವೇರಿ, ಏಕಾಏಕಿ ಮಕ್ನಾ ಆನೆ ಮೇಲೆ ದಾಳಿ ಮಾಡಿದೆ. ಈ ವೇಳೆ ಮಕ್ನಾ ಆನೆ ಕೆಳಗೆ ಬಿದ್ದಿದ್ದು, ಇದರ ಪಕ್ಕದಲ್ಲಿದ್ದ ಜಿನ್ಶು ಅವರು ಆನೆಯ ಅಡಿಯಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡರು.

ಇದನ್ನೂ ಓದಿ :

ಕೂಡಲೇ ಜಿನ್ಶು ಅವರನ್ನು ಕುಶಾಲನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಗಾಯಗೊಂಡ ಪತಿ ಜೋಯಲ್ ಗೆ ಚಿಕಿತ್ಸೆ ನೀಡಲಾಗಿದೆ.

ನದಿಯಲ್ಲಿ ಸಾಕಾನೆ “ಕಂಜನ್” ಮಕ್ನಾ ಆನೆ ಮೇಲೆ ದಾಳಿ ಮುಂದುವರಿಸುತ್ತಲೇ ಇದ್ದಾಗ ಆತಂಕಗೊಂಡ ಪ್ರವಾಸಿಗರು ಸ್ಥಳದಿಂದ ಚದುರಿದರು. ಘಟನೆ ಸಂದರ್ಭ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸ್ಥಳದಲ್ಲಿದ್ದರಾದರೂ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಅನಿರೀಕ್ಷಿತವಾಗಿ ನಡೆದ ಈ ಘಟನೆಯಿಂದ ಪ್ರವಾಸಿಗರು ಆಘಾತಗೊಂಡಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 hour ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

3 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

4 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

6 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

6 hours ago

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ ಬೆಂಗಳೂರು: ತುಮಕೂರಿನಲ್ಲಿ ನಾಳೆ…

7 hours ago