ಮಡಿಕೇರಿ : ಸಾಕಾನೆ ಮೈಮೇಲೆ ಬಿದ್ದ ಪರಿಣಾಮ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗಿನ ಹೆಸರುವಾಸಿ ಪ್ರವಾಸಿ ತಾಣ ದುಬಾರೆಯಲ್ಲಿ ನಡೆದಿದೆ.
ಚೆನ್ನೈ ಮೂಲದ ಪಲ್ಲಾವರಂ ನ ನಿವಾಸಿ ಜಿನ್ಶು (32) ಮೃತ ಮಹಿಳೆ. ಇವರ ಪತಿ ಜೋಯಲ್ ಅವರಿಗೂ ಗಾಯಗಳಾಗಿವೆ. “ಮಕ್ನಾ” ಎಂಬ ಹೆಸರಿನ ಸಾಕಾನೆಯನ್ನು ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯ ನದಿಯಲ್ಲಿ ಸ್ನಾನ ಮಾಡಿಸುತ್ತಿದ್ದ ದೃಶ್ಯವನ್ನು ಪ್ರವಾಸಿಗರು ವೀಕ್ಷಿಸುತ್ತಿದ್ದರು. ಈ ಸಂದರ್ಭ “ಕಂಜನ್” ಎಂಬ ಮತ್ತೊಂದು ಸಾಕಾನೆಗೆ ಮದವೇರಿ, ಏಕಾಏಕಿ ಮಕ್ನಾ ಆನೆ ಮೇಲೆ ದಾಳಿ ಮಾಡಿದೆ. ಈ ವೇಳೆ ಮಕ್ನಾ ಆನೆ ಕೆಳಗೆ ಬಿದ್ದಿದ್ದು, ಇದರ ಪಕ್ಕದಲ್ಲಿದ್ದ ಜಿನ್ಶು ಅವರು ಆನೆಯ ಅಡಿಯಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡರು.
ಇದನ್ನೂ ಓದಿ :
ಕೂಡಲೇ ಜಿನ್ಶು ಅವರನ್ನು ಕುಶಾಲನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಗಾಯಗೊಂಡ ಪತಿ ಜೋಯಲ್ ಗೆ ಚಿಕಿತ್ಸೆ ನೀಡಲಾಗಿದೆ.
ನದಿಯಲ್ಲಿ ಸಾಕಾನೆ “ಕಂಜನ್” ಮಕ್ನಾ ಆನೆ ಮೇಲೆ ದಾಳಿ ಮುಂದುವರಿಸುತ್ತಲೇ ಇದ್ದಾಗ ಆತಂಕಗೊಂಡ ಪ್ರವಾಸಿಗರು ಸ್ಥಳದಿಂದ ಚದುರಿದರು. ಘಟನೆ ಸಂದರ್ಭ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸ್ಥಳದಲ್ಲಿದ್ದರಾದರೂ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಅನಿರೀಕ್ಷಿತವಾಗಿ ನಡೆದ ಈ ಘಟನೆಯಿಂದ ಪ್ರವಾಸಿಗರು ಆಘಾತಗೊಂಡಿದ್ದಾರೆ.
ಇದನ್ನೂ ಓದಿ :
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…