Featured

ಮಡಿಕೇರಿ  :  ನಕ್ಸಲರ ಸಂಚಾರದ ಶಂಕೆ – ಪೊಲೀಸ್ ಕಟ್ಟೆಚ್ಚರ ; ಕೂಂಬಿಂಗ್ ಆರಂಭ – Vishwanews24

ಮಡಿಕೇರಿ  :  ನಕ್ಸಲರ ಸಂಚಾರದ ಶಂಕೆ: ಪೊಲೀಸ್ ಕಟ್ಟೆಚ್ಚರ – ಕೂಂಬಿಂಗ್ ಆರಂಭ

ಮಡಿಕೇರಿ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಾಲ್ವರಿಂದ ಐವರು ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೂಜಿಮಲೆ ಕಡಮಕಲ್ಲು ಭಾಗದ ಅಂಗಡಿಯೊಂದರಿಂದ ತಂಡವೊಂದು ದಿನಸಿ ಸಾಮಗ್ರಿ ಖರೀದಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ತಂಡವು ನಮ್ಮನ್ನು ಅರಣ್ಯ ಸಿಬ್ಬಂದಿ ಕಳುಹಿಸಿದ್ದಾರೆ ಎಂದು ಅಂಗಡಿಯವನ ಬಳಿ ಹೇಳಿಕೊಂಡಿದ್ದಾರೆ. ದಿನಸಿ ಪಡೆದು ಮರಳಿದ ನಂತರ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ಅಂಗಡಿಯವನು ನಡೆದ ವಿಚಾರ ತಿಳಿಸಿದಾಗ ಅರಣ್ಯ ಸಿಬ್ಬಂದಿ ನಾವು ಯಾರನ್ನೂ ಕಳುಹಿಸಿಲ್ಲವೆಂದು ಹೇಳಿದ್ದಾರೆ.

 

ಕೂಂಬಿಂಗ್ ಆರಂಭ: ಶಂಕಿತ ನಕ್ಸಲ್ ಪ್ರತ್ಯಕ್ಷದ ಹಿನ್ನೆಲೆಯಲ್ಲಿ ಸ್ಥಳಕ್ಕೆ ನಕ್ಸಲ್ ನಿಗ್ರಹ ಪಡೆ ಆಗಮಿಸಿದ್ದು, ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.
2012ರಲ್ಲಿ ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದಲ್ಲಿ ಮತ್ತು 2018ರಲ್ಲಿ ಸಂಪಾಜೆಯ ಗುಡ್ಡೆಗದ್ದೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಇದೀಗ ಕೂಜಿಮಲೆ ಕಡಮಕಲ್ಲು ಭಾಗದಲ್ಲಿ ನಕ್ಸಲ್ ಸಂಚಾರದ ಶಂಕೆ ವ್ಯಕ್ತವಾಗಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಕೂಜಿಮಲೆ ಕಡಮಕಲ್ಲು ಬೆಟ್ಟ ಪ್ರದೇಶದಿಂದ ಕೂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಪ್ರದೇಶ ವ್ಯಾಪಿಸಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago